ಬೆಂಗಳೂರು: ಕೆಆರ್ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿ ಅವರಿಂದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಆರ್ಪಿಪಿ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನ ಮಾಡಿದ್ದೇನೆ. ನನ್ನ ಪತ್ನಿ ಹಾಗೂ ನನ್ನ ಕಷ್ಟದ ಕಾಲದಲ್ಲಿ ಜೊತೆಗೆ ನಿಂತ ಎಲ್ರೂ ಬಿಜೆಪಿ ಸೇರಿದ್ದೇವೆ. ನನ್ನ ಗೆಳೆಯ ಶ್ರೀರಾಮುಲು ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದು ಭಾವುಕರಾಗಿದ್ದಾರೆ.
ಮೋದಿಯವರ ಕೈ ಬಲಪಡಿಸುವ ದೃಷ್ಟಿಯಿಂದ ಅಮಿತ್ ಶಾ ಅವರು ದೆಹಲಿಗೆ ಆಹ್ವಾನಿಸಿದ್ದರು. ಬಾಹ್ಯ ಬೆಂಬಲ ಬೇಡ, ಪಕ್ಷಕ್ಕೆ ಸೇರುವಂತೆ ಪ್ರೀತಿಯಿಂದ ಆಹ್ವಾನ ನೀಡಿದರು. ಅದನ್ನು ಒಪ್ಪಿ ಬಿಜೆಪಿಗೆ ಮತ್ತೆ ಸೇರಿದ್ದೇನೆ ಎಂದಿದ್ದಾರೆ.
ಯಾವುದೇ ಷರತ್ತು ಹಾಕಿಲ್ಲ:
ಯಡಿಯೂರಪ್ಪ ಅವರ ಬಗ್ಗೆ ಎರಡು ಮಾತಲ್ಲಿ ಹೇಳಲಾಗಲ್ಲ. ರಾಜ್ಯದಲ್ಲಿ ಬಿಜೆಪಿ ನೆಲೆಯೂರಲು ದೇವರು ಕಳಿಸಿದ ಅದ್ಭುತ ಸೃಷ್ಟಿ ಯಡಿಯೂರಪ್ಪ. ಅವರ ಜೊತೆ ಚಿಕ್ಕ ವಯಸ್ಸಲ್ಲೇ ಸೇರಿಕೊಂಡು ಪಕ್ಷ ಕಟ್ಟಿದ್ದು ನನ್ನ ಪೂರ್ವ ಜನ್ಮದ ಪುಣ್ಯ. ತಂದೆ-ಮಗನ ಜೊತೆಗೂಡಿ ಈಗ ಮತ್ತೆ ಪಕ್ಷದ ಕೆಲಸ ಮಾಡ್ತೀನಿ. ಇದು ಬಹಳ ಸಂತೋಷ ತಂದಿದೆ. ಯಾವುದೇ ಷರತ್ತು ಹಾಕಿಲ್ಲ, ಫಲಾಫೇಕ್ಷೆ ಬಯಸದೇ ಸೇರಿದ್ದೇನೆ ಎಂದು ಹೇಳಿದ್ದಾರೆ.
ತಾಯಿ ಮಡಿಲಿಗೆ ಸೇರಿದ್ದೇನೆ:
ಬಿಜೆಪಿ ನನಗೆ ಎಲ್ಲವೂ ಕೊಟ್ಟಿದೆ. ಅನೇಕ ಏಳು-ಬೀಳು ಕಂಡಿದ್ದೇನೆ, ಯಾವುದೇ ಜವಾಬ್ದಾರಿ ಕೊಟ್ಟರೂ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡ್ತೇನೆ. ನಾನು ನನ್ನ ಮನೆಗೆ ವಾಪಸ್ ಬಂದಿದ್ದೇನೆ. ರಕ್ತದ ಕಣಕಣದಲ್ಲೂ ಬಿಜೆಪಿ ಇದೆ. ಯಾವುದೋ ಅನಿವಾರ್ಯ ಕಾರಣದಿಂದ ಪಕ್ಷ ಬಿಡಬೇಕಾಗಿತ್ತು. ಈಗ ನಾನು ಸ್ವಂತ ಮನೆಗೆ ಮರಳಿದ್ದೇನೆ, ತಾಯಿ ಮಡಿಲಿಗೆ ಸೇರಿದ್ದೇನೆ. ನಾನು-ರಾಮುಲು ಒಂದು ಕುಟುಂಬ, ಒಟ್ಟಿಗೇ ಇರ್ತೀವಿ. ಇದು ನನ್ನ ಪಕ್ಷ ಎಂದು ಬೀಗಿದ್ದಾರೆ
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…