Featured

ರಕ್ಷಣೆಗಾಗಿ  ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ  – vishwanews24

ರಕ್ಷಣೆಗಾಗಿ ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಇರುವ ಠಾಣೆಗೆ ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಬಗ್ಗೆ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ಸಂಬಂಧ 13 ಮಂದಿ ಆರೋಪಿಗಳಿದ್ದಾರೆ. ಬೆಳಗ್ಗೆಯಿಂದ ಮಾಧ್ಯಮದವರು ಕ್ಯಾಮೆರಾ ಹಿಡಿದು ಕುಳಿತಿರುತ್ತಾರೆ. ಪೊಲೀಸರಿಗೆ ಯಾವುದೇ ಅಡತಡೆಗಳಿಲ್ಲದೇ ವಿಚಾರಣೆ ಮಾಡಲು ಅವಕಾಶಬೇಕು. ಆ ಹಿತದೃಷ್ಟಿಯಿಂದ ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ ತಿಳಿಸಿದರು.

ದರ್ಶನ್ ಪ್ರಕರಣ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡದ ಆರೋಪದ ಕುರಿತು ಮಾತನಾಡಿದ ಅವರು, ಸರ್ಕಾರದ ಯಾವ ಒತ್ತಡವೂ ಇಲ್ಲ, ಈ ಬಗ್ಗೆ ನಾನು ವಿಚಾರಿಸಿದ್ದೇನೆ. ನಮ್ಮ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರು ಇದರಲ್ಲಿ ಇನ್ವಾಲ್ ಆಗಿಲ್ಲ. ಯಾರೂ ಕೂಡ ಈ ಕೇಸ್‌ನಲ್ಲಿ ಹಸ್ತಕ್ಷೇಪ ಮಾಡ್ತಿಲ್ಲ. ಈ ಪ್ರಕರಣದ ಬಗ್ಗೆ ನಾವು ಪ್ರತಿಕ್ರಿಯೆ ಕೂಡ ಮಾಡುತ್ತಿಲ್ಲ ಎಂದು ಹೇಳಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago