ಬಹುಭಾಷಾ ನಟಿಯಾಗಿ ರಶ್ಮಿಕಾ ಮಂದಣ್ಣ ಸದ್ದು ಮಾಡ್ತಿದ್ದಾರೆ. ಸದ್ಯ `ಮಿಷನ್ ಮಜ್ನು’ ಚಿತ್ರದ ಪ್ರಚಾರ ಕಾರ್ಯದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕಿರಿಕ್ ಬ್ಯೂಟಿ ರಶ್ಮಿಕಾ, ರಕ್ಷಿತ್ ಮತ್ತು ರಿಷಬ್ ಮತ್ತು ಪುನೀತ್ ರಾಜ್ಕುಮಾರ್ ಅವರನ್ನ ನೆನಪಿಸಿಕೊಂಡಿದ್ದಾರೆ. ಇಬ್ಬರ ಬಗ್ಗೆ ಮಾತನಾಡಿರುವ ನಟಿಯ ಹೇಳಿಕೆ ಸಖತ್ ಸದ್ದು ಮಾಡುತ್ತಿದೆ.
ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದೇ ಕಿರಿಕ್ ಪಾರ್ಟಿ ಸಿನಿಮಾದಿಂದ, ರಿಷಬ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ರಶ್ಮಿಕಾ ನಟಿಸಿದ್ದರು. ಎರಡನೇ ಸಿನಿಮಾ `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ರಶ್ಮಿಕಾ ನಟಿಸಿದ್ದರು. ರಶ್ಮಿಕಾ ನಟಿಸಿದ ಈ ಎರಡು ಸಿನಿಮಾಗಳ ಬಗ್ಗೆ ಸಂದರ್ಶನವೊಂದರಲ್ಲಿ ಮತ್ತೆ ಪ್ರಶ್ನೆ ಎದುರಾಗಿದೆ. ಈ ನಟಿ ಅಚ್ಚರಿಯ ಹೇಳಿಕೆಯನ್ನ ಕೊಟ್ಟಿದ್ದಾರೆ.
ರಕ್ಷಿತ್ ಶೆಟ್ಟಿಹಾಗೂ ರಿಷಬ್ ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು. ಅವರು ನನಗೆ ಅವಕಾಶ ನೀಡಿದರು. `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ನಟಿಸಿದೆ. ಅವರು ವಿಶಾಲವಾಗಿ ಹೇಗೆ ಆಲೋಚಿಸೋದು ಅಂತಾ ಹೇಳಿಕೊಟ್ಟರು. ನಾನು ನಾಲ್ಕು ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನೇ ಅಚ್ಚರಿಗೊಳ್ಳುತ್ತೇನೆ. ನನ್ನ ಕಡೆಯಿಂದ ಅವರಿಗೆ ಧನ್ಯವಾದ ಎಂದಿದ್ದಾರೆ ರಶ್ಮಿಕಾ.
Join our Whatsapp group by clicking the below link 👇👇
https://chat.whatsapp.com/KfUmhXQKZb114i4QHNvqEK
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…