ರಘುಪತಿ ಭಟ್ ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿ – ಚುನಾವಣಾಧಿಕಾರಿಯವರಿಗೆ ರಘುಪತಿ ಭಟ್ ದೂರು : vishwanews24
ಉಡುಪಿ : ಖಾಸಾಗಿ ಚಾನೆಲ್ ಟಿವಿಯ ಸುದ್ದಿ ಮಾಧ್ಯಮದ ವಿಡಿಯೋ ಬಳಸಿ ರಘುಪತಿ ಭಟ್ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್ ನ್ಯೂಸ್ ಸುಳ್ಳು ಸುದ್ಧಿಯ ವಿಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದರ ಬಗ್ಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಚುನಾವಣಾಧಿಕಾರಿಯವರಿಗೆ ದೂರು ನೀಡಿದ್ದಾರೆ.
ನನಗೆ ನೈಋತ್ಯ ಪದವೀಧರರ ಕ್ಷೇತ್ರದಾದ್ಯಂತ ಅಪಾರ ಬೆಂಬಲ ವ್ಯಕ್ತವಾಗಿರುವುದರಿಂದ ಕಳೆದ ನಾಲ್ಕೈದು ದಿನಗಳಿಂದ ಎದುರಾಳಿಗಳು ನನ್ನ ವಿರುದ್ಧ ಶಡ್ಯಂತ್ರ ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ತೇಜೋವಧೆ ಹಾಗೂ ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿದ್ದರು. ಆದರೆ ಚುನಾವಣೆಯ ಮುಂಚಿನ ದಿನ ರಾತ್ರಿ ಸುವರ್ಣ ಚಾನೆಲ್ನ ಬ್ರೇಕಿಂಗ್ ನ್ಯೂಸ್ ಎಂಬಂತೆ ಬಿಂಬಿಸಿ ನಾನು ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ನಾನು ಚಾನಲ್ ವರದಿಗಾರರಲ್ಲಿ ಪ್ರಶ್ನಿಸಿದಾಗ ನಮ್ಮ ಚಾನಲ್ನಲ್ಲಿ ಈ ಕುರಿತಾದ ಯಾವುದೇ ಸುದ್ಧಿಯನ್ನು ನಾವು ಬಿತ್ತರಿಸಿಲ್ಲ ಎಂದು ತಿಳಿಸಿದ್ದಾರೆ. ಆದ್ದರಿಂದ ಚುನಾವಣಾ ಕಣದಲ್ಲಿರುವ ನನಗೆ ಈ ರೀತಿ ಸುಳ್ಳು ಸುದ್ಧಿ ಹಬ್ಬಿಸಿರುವುದರಿಂದ ಮತದಾರರು ಗೊಂದಲಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಸುಳ್ಳು ಸುದ್ಧಿ ಬಿತ್ತರಿಸಿದವರನ್ನು ಪತ್ತೆ ಮಾಡಿ ತಕ್ಷಣದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…