ಉಡುಪಿ

ರಘುಪತಿ ಭಟ್ ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿ – ಚುನಾವಣಾಧಿಕಾರಿಯವರಿಗೆ ರಘುಪತಿ ಭಟ್ ದೂರು : vishwanews24

ರಘುಪತಿ ಭಟ್ ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿ – ಚುನಾವಣಾಧಿಕಾರಿಯವರಿಗೆ ರಘುಪತಿ ಭಟ್ ದೂರು : vishwanews24

ಉಡುಪಿ : ಖಾಸಾಗಿ  ಚಾನೆಲ್ ಟಿವಿಯ ಸುದ್ದಿ ಮಾಧ್ಯಮದ ವಿಡಿಯೋ ಬಳಸಿ ರಘುಪತಿ ಭಟ್ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್ ನ್ಯೂಸ್ ಸುಳ್ಳು ಸುದ್ಧಿಯ ವಿಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದರ ಬಗ್ಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಚುನಾವಣಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ನನಗೆ ನೈಋತ್ಯ ಪದವೀಧರರ ಕ್ಷೇತ್ರದಾದ್ಯಂತ ಅಪಾರ ಬೆಂಬಲ ವ್ಯಕ್ತವಾಗಿರುವುದರಿಂದ ಕಳೆದ ನಾಲ್ಕೈದು ದಿನಗಳಿಂದ ಎದುರಾಳಿಗಳು ನನ್ನ ವಿರುದ್ಧ ಶಡ್ಯಂತ್ರ ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ತೇಜೋವಧೆ ಹಾಗೂ ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿದ್ದರು. ಆದರೆ ಚುನಾವಣೆಯ ಮುಂಚಿನ ದಿನ ರಾತ್ರಿ ಸುವರ್ಣ ಚಾನೆಲ್‌ನ ಬ್ರೇಕಿಂಗ್ ನ್ಯೂಸ್ ಎಂಬಂತೆ ಬಿಂಬಿಸಿ ನಾನು ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ನಾನು  ಚಾನಲ್ ವರದಿಗಾರರಲ್ಲಿ ಪ್ರಶ್ನಿಸಿದಾಗ ನಮ್ಮ ಚಾನಲ್‌ನಲ್ಲಿ ಈ ಕುರಿತಾದ ಯಾವುದೇ ಸುದ್ಧಿಯನ್ನು ನಾವು ಬಿತ್ತರಿಸಿಲ್ಲ ಎಂದು ತಿಳಿಸಿದ್ದಾರೆ. ಆದ್ದರಿಂದ ಚುನಾವಣಾ ಕಣದಲ್ಲಿರುವ ನನಗೆ ಈ ರೀತಿ ಸುಳ್ಳು ಸುದ್ಧಿ ಹಬ್ಬಿಸಿರುವುದರಿಂದ ಮತದಾರರು ಗೊಂದಲಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಸುಳ್ಳು ಸುದ್ಧಿ ಬಿತ್ತರಿಸಿದವರನ್ನು ಪತ್ತೆ ಮಾಡಿ ತಕ್ಷಣದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago