ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ಇಂದು ಮತ್ತೊಮ್ಮೆ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ತನ್ನ ಸುಸ್ಟಿದಾರರ ಎಫ್ ಐ ಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿದೆ ಅದನ್ನು ತಕ್ಷಣ ತೆರವು ಮಾಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಪತ್ರ ಬರೆದು ಮಾಧ್ಯಮಗಳಿಗೆ ಸುಳ್ಳು ಮಾಹಿತಿ ನೀಡಿದ್ದು, ಈ ತಡೆಯಾಜ್ಞೆ ಪ್ರತಿಯನ್ನು ರಘುಪತಿ ಭಟ್ ಬಳಿ ಇದ್ದರೆ ತಕ್ಷಣ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮಾಧ್ಯಮಗಳಿಗೆ ನೀಡುವಂತೆ ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ..
ದಿನಾಂಕ ನವೆಂಬರ್ 9 ರಂದು ಪತ್ರಿಕಾಗೋಷ್ಟಿ ನಡೆಸಿ ರಘುಪತಿ ಭಟ್ ಆಧಾರ ರಹಿತ ಆರೋಪಗಳಿಗೆ ಬ್ಯಾಂಕಿನ ಆಡಳಿತ ಮಂಡಳಿ ಉತ್ತರ ನೀಡಿ ಯಾವುದೇ ತನಿಖೆಗೆ ಸ್ವಾಗತ ಎಂದು ತಿಳಿಸಿದರೂ, ಹತಾಶ ಮನಸ್ಥಿತಿಯ ರಘುಪತಿ ಭಟ್ ಇದೀಗ ನ್ಯಾಯಾಂಗ ವ್ಯವಸ್ಥೆಯನ್ನೇ ತಿರುಚಿ ಸುಳ್ಳು ಸುದ್ದಿ ಸೃಷ್ಟಿಸಿ ಮಾಧ್ಯಮಗಳು ಹಾಗೂ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ.
ರಘುಪತಿ ಭಟ್ ರವರು ಇದೀಗ ತಮ್ಮ ಸ್ವಾರ್ಥ ಸಾಧನೆಗಾಗಿ ಇಡೀ ಸಹಕಾರಿ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ಇದು ಇಡೀ ಸಹಕಾರಿ ಕ್ಷೇತ್ರಕ್ಕೆ ಮಾಡಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…