ರಜತ ಉಡುಪಿ : ಜ. 20 ರಿಂದ 22 ರ ವರೆಗೆ ಮಲ್ಪೆ ಬೀಚ್ ಉತ್ಸವ  – Vishwanews24

Featured, ಉಡುಪಿ

ರಜತ ಉಡುಪಿ-ಜ. 20 ರಿಂದ 22 ರ ವರೆಗೆ ಮಲ್ಪೆ ಬೀಚ್ ಉತ್ಸವ 

ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮವು ಜನವರಿ 20 ರಿಂದ 22 ರ ವರೆಗೆ ಮಲ್ಪೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಜ. 20ರಿಂದ 22ರವರೆಗೆ ಮಲ್ಪೆಯಲ್ಲಿ ಬೀಚ್‌ ಉತ್ಸವ: ವೈವಿಧ್ಯ ಕಾರ್ಯಕ್ರಮ | udayavani

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಪ್ರವಾಸೋದ್ಯಮ, ಪರಿಸರ ಹಾಗೂ ಜೀವಶಾಸ್ತç ಇಲಾಖೆ ಸಚಿವ ಆನಂದ್ ಸಿಂಗ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿçÃಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಂಗಳೂರು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಹಾಗೂ ಮತ್ತಿತರರು ಭಾಗವಹಿಸಲಿರುವರು.

ಉಡುಪಿ: ಯುವತಿ ನಾಪತ್ತೆ – Vishwanews24

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply