ರಜನಿಕಾಂತ್ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದದ್ದು ನನಗೆ ನಿರಾಶೆಯಾಗಿದೆ: ಕಮಲ್ ಹಾಸನ್ -Vishwanews24

Featured, ರಾಷ್ಟ್ರ ನ್ಯೂಸ್

ರಜನಿಕಾಂತ್ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದದ್ದು ನನಗೆ ನಿರಾಶೆಯಾಗಿದೆ: ಕಮಲ್ ಹಾಸನ್ -Vishwanews24

ಚೆನ್ನೈ: ರಜನಿಕಾಂತ್ ಅವರು ಅನಾರೋಗ್ಯ ಹಿನ್ನೆಲೆ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರಿಂದ ನನಗೂ ನಿರಾಶೆಯಾಗಿದೆ ಎಂದು ಮಕ್ಕಳ್ ನೀಧಿ ಮಯ್ಯಮ್ ಪಕ್ಷದ (ಎಂಎನ್‌ಎಂ) ಮುಖ್ಯಸ್ಥ ಕಮಲ್ ಹಾಸನ್ ಬೇಸರ ಹೊರಹಾಕಿದ್ದಾರೆ.

ಅಧಿಕ ರಕ್ತದೊತ್ತಡದಿಂದ ಹೈದರಾಬಾದ್​ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೂಪರ್ ಸ್ಟಾರ್​ ರಜನಿಕಾಂತ್, ಆಸ್ಪತ್ರೆಯಿಂದ ಬಿಡುಗಡೆಯಾದ ಮರು ದಿನ ರಾಜಕೀಯ ಪಕ್ಷ ಸ್ಥಾಪನೆಯ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ.

ನನ್ನ ಚುನಾವಣಾ ಪ್ರಚಾರದ ನಂತರ ನಾನು ಮತ್ತೆ ರಜನಿಕಾಂತ್ ಅವರನ್ನು ಭೇಟಿಯಾಗುತ್ತೇನೆ. ಅವರ ಅಭಿಮಾನಿಗಳಂತೆ ನನಗೂ ನಿರಾಶೆಯಾಗಿದೆ. ಆದರೆ ಅವರ ಆರೋಗ್ಯ ಮುಖ್ಯವಾಗಿದೆ. ಅವರು ಆರೋಗ್ಯವಾಗಿರಬೇಕು ಮತ್ತು ಚೆನ್ನಾಗಿರಬೇಕು ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.