Featured

ರನ್ಯಾ ಮದುವೆಗೆ ಪರಮೇಶ್ವರ್‌ 15- 20 ಲಕ್ಷ ರೂ. ಗಿಫ್ಟ್‌ ಕೊಟ್ಟಿರಬಹುದು : ಡಿ.ಕೆ ಶಿವಕುಮಾರ್‌ – vishwanews24

ರನ್ಯಾ ಮದುವೆಗೆ ಪರಮೇಶ್ವರ್‌ 15- 20 ಲಕ್ಷ ರೂ. ಗಿಫ್ಟ್‌ ಕೊಟ್ಟಿರಬಹುದು : ಡಿ.ಕೆ ಶಿವಕುಮಾರ್‌

ಬೆಂಗಳೂರು: ರನ್ಯಾ ಮದುವೆಗೆ ಪರಮೇಶ್ವರ್‌ 15- 20 ಲಕ್ಷ ರೂ. ಗಿಫ್ಟ್‌ ಕೊಟ್ಟಿರಬಹುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌  ಹೇಳಿದ್ದಾರೆ.

ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪರಮೇಶ್ವರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಅವರು, ರನ್ಯಾಗೆ 15 ರಿಂದ 25 ಲಕ್ಷ ರೂ. ನೀಡಿದ್ದಾರಂತೆ. ಆಕೆಯ ಮದುವೆಗೆ ಗಿಫ್ಟ್‌ ಮಾಡಿರಬಹುದು. ನಾನು ಅವರ ಬಳಿ ಮಾತಾಡಿದ್ದೇನೆ ಎಂದಿದ್ದಾರೆ.

ಪರಮೇಶ್ವರ್‌ ಆರೋಗ್ಯವಾಗಿದ್ದು, ಕ್ಯಾಬಿನೆಟ್‌ಗೆ ಬರುತ್ತಾರೆ. ಅವರ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಅವರು ಗೌರವಾನ್ವಿತ ವ್ಯಕ್ತಿ, ನಾನು ಅವರ ಜೊತೆ ಇರುತ್ತೇನೆ. ಇನ್ನೂ, ರನ್ಯಾ ತಪ್ಪು ಮಾಡಿದ್ರೆ ಕ್ರಮ ಆಗಲಿ ಎಂದಿದ್ದಾರೆ.

ಇಡಿ ದಾಳಿ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌, ಬುಧವಾರ ಸುದ್ದಿಗೋಷ್ಠಿ ನಡೆಸಿ, ರನ್ಯಾರಾವ್ ವಿದೇಶದಿಂದ ಚಿನ್ನ ತಂದು ಹಲವು ಪ್ರಮುಖರಿಗೆ ನೀಡಿರುವ ಮಾಹಿತಿಯಿದೆ. ಈ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಹೂಡಿಕೆ ಮಾಡುತ್ತಿದ್ದ ಬಗ್ಗೆ ಇಡಿ ಮಾಹಿತಿ ಸಂಗ್ರಹಿಸಿರಬಹುದು ಎಂದು ಆರೋಪಿಸಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

11 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

11 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

12 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago