Featured

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ

ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ವಿಮಾನ ದುರಂತವೊಂದು ಏರ್ ಟ್ರಾಫಿಕ್ ಕಂಟ್ರೋಲ್ (ATC) ಅಧಿಕಾರಿಗಳ ಸಮಯೋಚಿತ ಕ್ರಮದಿಂದ ಕೂದಲೆಳೆ ಅಂತರದಲ್ಲಿ ತಪ್ಪಿದೆ. ತಪ್ಪು ಮಾರ್ಗಕ್ಕೆ ಪ್ರವೇಶಿಸಿದ್ದ ಏರ್ ಇಂಡಿಯಾ ವಿಮಾನ ಮತ್ತು ಟೇಕ್‌ಆಫ್‌ಗೆ ಸಜ್ಜಾಗಿದ್ದ ಇಂಡಿಗೋ ವಿಮಾನ ಕೇವಲ 200 ಮೀಟರ್ ಅಂತರದಲ್ಲಿ ಮುಖಾಮುಖಿಯಾಗುವ ಸ್ಥಿತಿಗೆ ತಲುಪಿದ್ದವು.

ಬುಧವಾರ ಸಂಜೆ ಸುಮಾರು 6.30ರ ವೇಳೆಗೆ ಮುಂಬೈನಿಂದ ಅಹಮದಾಬಾದ್‌ಗೆ ಬಂದಿಳಿದ ಏರ್ ಇಂಡಿಯಾ ವಿಮಾನ AI-2493, ರನ್‌ವೇಯಿಂದ ಪಾರ್ಕಿಂಗ್ ಬೇ ಕಡೆಗೆ ತೆರಳುವ ವೇಳೆ ಪೈಲಟ್ ಮಾಡಿದ ತಪ್ಪು ತಿರುವಿನ ಪರಿಣಾಮ ಸಕ್ರಿಯ ಟ್ಯಾಕ್ಸಿವೇಗೆ ಪ್ರವೇಶಿಸಿತು. ಅದೇ ಸಮಯದಲ್ಲಿ ಮುಂಬೈಗೆ ಹಾರಾಟ ನಡೆಸಲು ಸಿದ್ಧವಾಗಿದ್ದ ಇಂಡಿಗೋ ವಿಮಾನ 6E-5160 ಅದೇ ಮಾರ್ಗದಲ್ಲಿ ಚಲಿಸುತ್ತಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಎಟಿಸಿ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಎರಡೂ ವಿಮಾನಗಳ ಪೈಲಟ್‌ಗಳಿಗೆ ತುರ್ತು ಸೂಚನೆ ನೀಡಿದರು.

ಎಟಿಸಿಯ ಸೂಚನೆಗೆ ಸ್ಪಂದಿಸಿದ ಪೈಲಟ್‌ಗಳು ತಕ್ಷಣವೇ ವಿಮಾನಗಳನ್ನು ನಿಲ್ಲಿಸಿದ ಪರಿಣಾಮ, ಎರಡೂ ವಿಮಾನಗಳು ಕೇವಲ 200 ಮೀಟರ್ ಅಂತರದಲ್ಲಿ ನಿಂತು ಸಂಭವನೀಯ ದುರಂತ ತಪ್ಪಿತು. ಕೆಲವೇ ಕ್ಷಣಗಳ ವಿಳಂಬವಾಗಿದ್ದರೂ ದೊಡ್ಡ ಅಪಘಾತ ಸಂಭವಿಸುವ ಸಾಧ್ಯತೆ ಇತ್ತು ಎಂದು ಮೂಲಗಳು ತಿಳಿಸಿವೆ. ಅಪಾಯದ ಪರಿಸ್ಥಿತಿ ನಿವಾರಣೆಯಾದ ನಂತರ, ತಪ್ಪು ಮಾರ್ಗಕ್ಕೆ ಪ್ರವೇಶಿಸಿದ್ದ ಏರ್ ಇಂಡಿಯಾ ವಿಮಾನವನ್ನು ನೆಲದ ಸಹಾಯಕ ಸಿಬ್ಬಂದಿಯ ನೆರವಿನಿಂದ ಸುರಕ್ಷಿತವಾಗಿ ಅದರ ನಿಗದಿತ ಪಾರ್ಕಿಂಗ್ ಬೇಗೆ ಕರೆದೊಯ್ಯಲಾಯಿತು. ಬಳಿಕ ಇಂಡಿಗೋ ವಿಮಾನವು ತನ್ನ ನಿಗದಿತ ವೇಳಾಪಟ್ಟಿಯಂತೆ ಮುಂಬೈಗೆ ಸುರಕ್ಷಿತವಾಗಿ ಹಾರಾಟ ನಡೆಸಿತು.

ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಅಥವಾ ವಿಮಾನಗಳಿಗೆ ಹಾನಿಯಾಗಿಲ್ಲ ಎಂದು ಎರಡೂ ವಿಮಾನಯಾನ ಸಂಸ್ಥೆಗಳು ಸ್ಪಷ್ಟಪಡಿಸಿವೆ. ಈ ಗಂಭೀರ ಸುರಕ್ಷತಾ ಲೋಪದ ಕುರಿತು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ)ಗೆ ಮಾಹಿತಿ ನೀಡಲಾಗಿದ್ದು, ಘಟನೆಯ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ. ವಿಮಾನಗಳು ಮುಖಾಮುಖಿಯಾಗುವ ಹಂತಕ್ಕೆ ತಲುಪಿದ್ದ ಸಂದರ್ಭದಲ್ಲೂ ಎಟಿಸಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದರಿಂದ ನೂರಾರು ಪ್ರಯಾಣಿಕರ ಜೀವಗಳು ಸುರಕ್ಷಿತವಾಗಿವೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago