Featured

ರನ್‌ವೇ ಬಿಟ್ಟು ಫೆಸಿಫಿಕ್‌ ಸರೋವರದಲ್ಲಿ ಇಳಿದ ವಿಮಾನ ; ಪ್ರಯಾಣಿಕರ ರಕ್ಷಣೆ

ಪಲಿಕಿರ್: ತಾಂತ್ರಿಕ ದೋಷದಿಂದಾಗಿ 47 ಜನರಿದ್ದ ಪ್ರಯಾಣಿಕ ವಿಮಾನವೊಂದು ರನ್ ವೇಯಿಂದ ಮುನ್ನುಗ್ಗಿ ಸಮುದ್ರಕ್ಕೆ ಬಿದ್ದಿರುವ ಘಟನೆ ದಕ್ಷಿಣ ಪೆಸಿಫಿಕ್ ಸಾಗರದ ದ್ವೀಪ ರಾಷ್ಟ್ರವಾದ ಮೈಕ್ರೋನೇಷ್ಯಾದ ಛುಕ್ ಪ್ರದೇಶದಲ್ಲಿ ನಡೆದಿದೆ.

ಕಳೆದ ಶುಕ್ರವಾರ ತಾಂತ್ರಿಕ ದೋಷದಿಂದಾಗಿ ಬೋಯಿಂಗ್ 737 ವಿಮಾನವು, ನಿಲ್ದಾಣದ ರನ್ ವೇ ನಿಂದ ಮುನ್ನುಗ್ಗಿ ಸಮುದ್ರಕ್ಕೆ ಬಿದ್ದಿದೆ. ಕೂಡಲೇ ವಿಮಾನ ನಿಲ್ದಾಣ ಸಿಬ್ಬಂದಿ ಹಾಗೂ ರಕ್ಷಣಾ ಪಡೆಗಳು ವಿಮಾನದಲ್ಲಿದ್ದ ಎಲ್ಲಾ 47 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಅಲ್ಲದೇ ವಿಮಾನ ಸಮುದ್ರಕ್ಕೆ ನುಗ್ಗುತ್ತಲೇ ಕೆಲವು ಪ್ರಯಾಣಿಕರು ವಿಮಾನದ ತುರ್ತು ಬಾಗಿಲನ್ನು ತೆರೆದು, ಸಮುದ್ರದಲ್ಲಿ ಈಜಿ ದಡ ಸೇರುವ ಮೂಲಕ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.

ಅಪಘಾತವಾದ ಬೋಯಿಂಗ್ 737 ವಿಮಾನವು ಪಪುವಾ ನ್ಯೂಗಿನಿಯಾ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾದ `ಏರ್ ನ್ಯೂಗಿನಿ’ಗೆ ಸೇರಿದ್ದಾಗಿದೆ. ವಿಮಾನದಲ್ಲಿ 36 ಪ್ರಯಾಣಿಕರು ಹಾಗೂ 11 ಮಂದಿ ಸಿಬ್ಬಂದಿಯಿದ್ದರು. ವಿಮಾನವು ವೆನೋ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ, ತಾಂತ್ರಿಕ ದೋಷದಿಂದ ನಿಯಂತ್ರಣಕ್ಕೆ ಬಾರದೆ ರನ್ ವೇ ದಾಟಿ ಸಮುದ್ರದ ಕಡೆ ನುಗ್ಗಿದೆ.

ಘಟನೆ ಸಂಬಂಧ ಏರ್ ನ್ಯೂಗಿನಿಯಾ ವಿಮಾನಯಾನ ಸಂಸ್ಥೆ ತನಿಖೆ ಕೈಗೊಂಡಿದೆ. ಅಲ್ಲದೇ ವೆನೋ ವಿಮಾನದ ಸುತ್ತಮುತ್ತ ಭಾರೀ ಮಳೆ ಬಿದ್ದ ಹಿನ್ನೆಲೆಯಲ್ಲಿ ಪೈಲೆಟ್‍ಗಳು ರನ್‍ವೇ ಅನ್ನು ಗುರುತಿಸುವಲ್ಲಿ ವಿಫಲರಾಗಿದ್ದೇ ಅವಘಡಕ್ಕೆ ಕಾರಣ ಎಂಬುದಾಗಿ ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.

ವಿಮಾನ ಸಮುದ್ರಕ್ಕೆ ಬಿದ್ದು, ಅರ್ಧ ಮುಳುಗಿದ್ದರೂ ನಮಗೆ ವಿಮಾನ ಮುಳುಗುತ್ತಿರುವ ವಿಚಾರ ಗೊತ್ತೆ ಆಗಿರಲಿಲ್ಲ. ರಕ್ಷಣಾ ಸಿಬ್ಬಂದಿಯವರು ಸ್ಥಳಕ್ಕೆ ಬಂದಾಗ ನಮಗೆ ವಿಮಾನ ಅವಘಡ ಸಂಭವಿಸಿರುವ ಬಗ್ಗೆ ತಿಳಿಯಿತು ಎಂದು ಭಾರೀ ದುರಂತದಿಂದ ಪಾರಾದ ಪ್ರಯಾಣಿಕರು ಹೇಳಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

3 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

4 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

4 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

4 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

5 hours ago