Featured

ರನ್‌ವೇ ಬಿಟ್ಟು ಫೆಸಿಫಿಕ್‌ ಸರೋವರದಲ್ಲಿ ಇಳಿದ ವಿಮಾನ ; ಪ್ರಯಾಣಿಕರ ರಕ್ಷಣೆ

ಪಲಿಕಿರ್: ತಾಂತ್ರಿಕ ದೋಷದಿಂದಾಗಿ 47 ಜನರಿದ್ದ ಪ್ರಯಾಣಿಕ ವಿಮಾನವೊಂದು ರನ್ ವೇಯಿಂದ ಮುನ್ನುಗ್ಗಿ ಸಮುದ್ರಕ್ಕೆ ಬಿದ್ದಿರುವ ಘಟನೆ ದಕ್ಷಿಣ ಪೆಸಿಫಿಕ್ ಸಾಗರದ ದ್ವೀಪ ರಾಷ್ಟ್ರವಾದ ಮೈಕ್ರೋನೇಷ್ಯಾದ ಛುಕ್ ಪ್ರದೇಶದಲ್ಲಿ ನಡೆದಿದೆ.

ಕಳೆದ ಶುಕ್ರವಾರ ತಾಂತ್ರಿಕ ದೋಷದಿಂದಾಗಿ ಬೋಯಿಂಗ್ 737 ವಿಮಾನವು, ನಿಲ್ದಾಣದ ರನ್ ವೇ ನಿಂದ ಮುನ್ನುಗ್ಗಿ ಸಮುದ್ರಕ್ಕೆ ಬಿದ್ದಿದೆ. ಕೂಡಲೇ ವಿಮಾನ ನಿಲ್ದಾಣ ಸಿಬ್ಬಂದಿ ಹಾಗೂ ರಕ್ಷಣಾ ಪಡೆಗಳು ವಿಮಾನದಲ್ಲಿದ್ದ ಎಲ್ಲಾ 47 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಅಲ್ಲದೇ ವಿಮಾನ ಸಮುದ್ರಕ್ಕೆ ನುಗ್ಗುತ್ತಲೇ ಕೆಲವು ಪ್ರಯಾಣಿಕರು ವಿಮಾನದ ತುರ್ತು ಬಾಗಿಲನ್ನು ತೆರೆದು, ಸಮುದ್ರದಲ್ಲಿ ಈಜಿ ದಡ ಸೇರುವ ಮೂಲಕ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.

ಅಪಘಾತವಾದ ಬೋಯಿಂಗ್ 737 ವಿಮಾನವು ಪಪುವಾ ನ್ಯೂಗಿನಿಯಾ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾದ `ಏರ್ ನ್ಯೂಗಿನಿ’ಗೆ ಸೇರಿದ್ದಾಗಿದೆ. ವಿಮಾನದಲ್ಲಿ 36 ಪ್ರಯಾಣಿಕರು ಹಾಗೂ 11 ಮಂದಿ ಸಿಬ್ಬಂದಿಯಿದ್ದರು. ವಿಮಾನವು ವೆನೋ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ, ತಾಂತ್ರಿಕ ದೋಷದಿಂದ ನಿಯಂತ್ರಣಕ್ಕೆ ಬಾರದೆ ರನ್ ವೇ ದಾಟಿ ಸಮುದ್ರದ ಕಡೆ ನುಗ್ಗಿದೆ.

ಘಟನೆ ಸಂಬಂಧ ಏರ್ ನ್ಯೂಗಿನಿಯಾ ವಿಮಾನಯಾನ ಸಂಸ್ಥೆ ತನಿಖೆ ಕೈಗೊಂಡಿದೆ. ಅಲ್ಲದೇ ವೆನೋ ವಿಮಾನದ ಸುತ್ತಮುತ್ತ ಭಾರೀ ಮಳೆ ಬಿದ್ದ ಹಿನ್ನೆಲೆಯಲ್ಲಿ ಪೈಲೆಟ್‍ಗಳು ರನ್‍ವೇ ಅನ್ನು ಗುರುತಿಸುವಲ್ಲಿ ವಿಫಲರಾಗಿದ್ದೇ ಅವಘಡಕ್ಕೆ ಕಾರಣ ಎಂಬುದಾಗಿ ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.

ವಿಮಾನ ಸಮುದ್ರಕ್ಕೆ ಬಿದ್ದು, ಅರ್ಧ ಮುಳುಗಿದ್ದರೂ ನಮಗೆ ವಿಮಾನ ಮುಳುಗುತ್ತಿರುವ ವಿಚಾರ ಗೊತ್ತೆ ಆಗಿರಲಿಲ್ಲ. ರಕ್ಷಣಾ ಸಿಬ್ಬಂದಿಯವರು ಸ್ಥಳಕ್ಕೆ ಬಂದಾಗ ನಮಗೆ ವಿಮಾನ ಅವಘಡ ಸಂಭವಿಸಿರುವ ಬಗ್ಗೆ ತಿಳಿಯಿತು ಎಂದು ಭಾರೀ ದುರಂತದಿಂದ ಪಾರಾದ ಪ್ರಯಾಣಿಕರು ಹೇಳಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago