ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪ ಕುರಿತಂತೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ತಿರಸ್ಕರಿಸಿದ್ದು, ರಫೇಲ್ ಪ್ರಕರಣದ ತನಿಖೆ ಅಗತ್ಯವಿಲ್ಲ ಎಂದು ತೀರ್ಪು ನೀಡುವ ಮೂಲಕ ಕೇಂದ್ರಕ್ಕೆ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ನ.14ರಂದು ತೀರ್ಪು ಕಾಯ್ದಿರಿಸಿತ್ತು. ವಕೀಲ ಎಂ.ಎಲ್.ಶರ್ಮಾ ರಫೇಲ್ ಯುದ್ಧ ವಿಮಾನ ಖರೀದಿ ಅವ್ಯವಹಾರದ ಸಂಬಂಧ ಮೊದಲು ಪ್ರಕರಣ ದಾಖಲಿಸಿದ್ದು, ನಂತರ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ನಾ, ಅರುಣ್ ಶೌರಿ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕೂಡ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ದೂರು ಸಲ್ಲಿಸಿದ್ದರು.
ಇಂದು ತೀರ್ಪು ಪ್ರಕಟಿಸಿರುವ ನ್ಯಾಯಪೀಠ ತನಿಖೆಗೆ ಅಸಮ್ಮತಿ ಸೂಚಿಸಿದ್ದು, ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿದೆ. ವಿಮಾನ ಖರೀದಿ ಪ್ರಕ್ರಿಯೆಯು ನಮಗೆ ತೃಪ್ತಿಯನ್ನು ತಂದಿದೆ. ಒಪ್ಪಂದ ಕುರಿತು ಯಾವುದೇ ರೀತಿಯ ಸಂಶಯಗಳೂ ಮೂಡುತ್ತಿಲ್ಲ. ಯಾವುದೇ ರೀತಿಯ ಸಿದ್ಥತೆಗಳಿಲ್ಲದೆ ಒಂದು ದೇಶ ಇರಲು ಸಾಧ್ಯವಿಲ್ಲ. 126 ಯುದ್ಧ ವಿಮಾನಗಳನ್ನೇ ಖರೀದಿ ಮಾಡುವಂತೆ ಸರ್ಕಾರಕ್ಕೆ ನಾವು ಒತ್ತಾಯ ಮಾಡಲು ಸಾಧ್ಯವಿಲ್ಲ. ಪ್ರತೀಯೊಂದು ಭಾಗದಲ್ಲೂ ಅಂಶಗಳಲ್ಲೂ ನ್ಯಾಯಾಲಯ ಪರಿಶೀಲನೆ ನಡೆಸುವುದು ಸರಿಯಲ್ಲ. ಬೆಲೆ ಹೋಲಿಕೆ ಮಾಡುವುದು ನ್ಯಾಯಾಲಯದ ಕೆಲಸವೂ ಅಲ್ಲ ಎಂದು ಹೇಳಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…