Featured

ರಫೇಲ್ ಡೀಲ್ ಪ್ರಕರಣ ; ತನಿಖೆ ಅಗತ್ಯವಿಲ್ಲ ಎಂದ ಸುಪ್ರೀಂಕೋರ್ಟ್: ಕೇಂದ್ರ ಸರ್ಕಾರ ಕ್ಕೆ ಬಿಗ್ ರಿಲೀಫ್..

ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪ ಕುರಿತಂತೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ತಿರಸ್ಕರಿಸಿದ್ದು, ರಫೇಲ್ ಪ್ರಕರಣದ ತನಿಖೆ ಅಗತ್ಯವಿಲ್ಲ ಎಂದು ತೀರ್ಪು ನೀಡುವ ಮೂಲಕ ಕೇಂದ್ರಕ್ಕೆ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ನ.14ರಂದು ತೀರ್ಪು ಕಾಯ್ದಿರಿಸಿತ್ತು. ವಕೀಲ ಎಂ.ಎಲ್.ಶರ್ಮಾ ರಫೇಲ್ ಯುದ್ಧ ವಿಮಾನ ಖರೀದಿ ಅವ್ಯವಹಾರದ ಸಂಬಂಧ ಮೊದಲು ಪ್ರಕರಣ ದಾಖಲಿಸಿದ್ದು, ನಂತರ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ನಾ, ಅರುಣ್ ಶೌರಿ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕೂಡ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ದೂರು ಸಲ್ಲಿಸಿದ್ದರು.

ಇಂದು ತೀರ್ಪು ಪ್ರಕಟಿಸಿರುವ ನ್ಯಾಯಪೀಠ ತನಿಖೆಗೆ ಅಸಮ್ಮತಿ ಸೂಚಿಸಿದ್ದು, ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿದೆ. ವಿಮಾನ ಖರೀದಿ ಪ್ರಕ್ರಿಯೆಯು ನಮಗೆ ತೃಪ್ತಿಯನ್ನು ತಂದಿದೆ. ಒಪ್ಪಂದ ಕುರಿತು ಯಾವುದೇ ರೀತಿಯ ಸಂಶಯಗಳೂ ಮೂಡುತ್ತಿಲ್ಲ. ಯಾವುದೇ ರೀತಿಯ ಸಿದ್ಥತೆಗಳಿಲ್ಲದೆ ಒಂದು ದೇಶ ಇರಲು ಸಾಧ್ಯವಿಲ್ಲ. 126 ಯುದ್ಧ ವಿಮಾನಗಳನ್ನೇ ಖರೀದಿ ಮಾಡುವಂತೆ ಸರ್ಕಾರಕ್ಕೆ ನಾವು ಒತ್ತಾಯ ಮಾಡಲು ಸಾಧ್ಯವಿಲ್ಲ. ಪ್ರತೀಯೊಂದು ಭಾಗದಲ್ಲೂ ಅಂಶಗಳಲ್ಲೂ ನ್ಯಾಯಾಲಯ ಪರಿಶೀಲನೆ ನಡೆಸುವುದು ಸರಿಯಲ್ಲ. ಬೆಲೆ ಹೋಲಿಕೆ ಮಾಡುವುದು ನ್ಯಾಯಾಲಯದ ಕೆಲಸವೂ ಅಲ್ಲ ಎಂದು ಹೇಳಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago