ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪ ಕುರಿತಂತೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ತಿರಸ್ಕರಿಸಿದ್ದು, ರಫೇಲ್ ಪ್ರಕರಣದ ತನಿಖೆ ಅಗತ್ಯವಿಲ್ಲ ಎಂದು ತೀರ್ಪು ನೀಡುವ ಮೂಲಕ ಕೇಂದ್ರಕ್ಕೆ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ನ.14ರಂದು ತೀರ್ಪು ಕಾಯ್ದಿರಿಸಿತ್ತು. ವಕೀಲ ಎಂ.ಎಲ್.ಶರ್ಮಾ ರಫೇಲ್ ಯುದ್ಧ ವಿಮಾನ ಖರೀದಿ ಅವ್ಯವಹಾರದ ಸಂಬಂಧ ಮೊದಲು ಪ್ರಕರಣ ದಾಖಲಿಸಿದ್ದು, ನಂತರ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ನಾ, ಅರುಣ್ ಶೌರಿ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕೂಡ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ದೂರು ಸಲ್ಲಿಸಿದ್ದರು.
ಇಂದು ತೀರ್ಪು ಪ್ರಕಟಿಸಿರುವ ನ್ಯಾಯಪೀಠ ತನಿಖೆಗೆ ಅಸಮ್ಮತಿ ಸೂಚಿಸಿದ್ದು, ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿದೆ. ವಿಮಾನ ಖರೀದಿ ಪ್ರಕ್ರಿಯೆಯು ನಮಗೆ ತೃಪ್ತಿಯನ್ನು ತಂದಿದೆ. ಒಪ್ಪಂದ ಕುರಿತು ಯಾವುದೇ ರೀತಿಯ ಸಂಶಯಗಳೂ ಮೂಡುತ್ತಿಲ್ಲ. ಯಾವುದೇ ರೀತಿಯ ಸಿದ್ಥತೆಗಳಿಲ್ಲದೆ ಒಂದು ದೇಶ ಇರಲು ಸಾಧ್ಯವಿಲ್ಲ. 126 ಯುದ್ಧ ವಿಮಾನಗಳನ್ನೇ ಖರೀದಿ ಮಾಡುವಂತೆ ಸರ್ಕಾರಕ್ಕೆ ನಾವು ಒತ್ತಾಯ ಮಾಡಲು ಸಾಧ್ಯವಿಲ್ಲ. ಪ್ರತೀಯೊಂದು ಭಾಗದಲ್ಲೂ ಅಂಶಗಳಲ್ಲೂ ನ್ಯಾಯಾಲಯ ಪರಿಶೀಲನೆ ನಡೆಸುವುದು ಸರಿಯಲ್ಲ. ಬೆಲೆ ಹೋಲಿಕೆ ಮಾಡುವುದು ನ್ಯಾಯಾಲಯದ ಕೆಲಸವೂ ಅಲ್ಲ ಎಂದು ಹೇಳಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…