ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪ ಕುರಿತಂತೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ತಿರಸ್ಕರಿಸಿದ್ದು, ರಫೇಲ್ ಪ್ರಕರಣದ ತನಿಖೆ ಅಗತ್ಯವಿಲ್ಲ ಎಂದು ತೀರ್ಪು ನೀಡುವ ಮೂಲಕ ಕೇಂದ್ರಕ್ಕೆ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ನ.14ರಂದು ತೀರ್ಪು ಕಾಯ್ದಿರಿಸಿತ್ತು. ವಕೀಲ ಎಂ.ಎಲ್.ಶರ್ಮಾ ರಫೇಲ್ ಯುದ್ಧ ವಿಮಾನ ಖರೀದಿ ಅವ್ಯವಹಾರದ ಸಂಬಂಧ ಮೊದಲು ಪ್ರಕರಣ ದಾಖಲಿಸಿದ್ದು, ನಂತರ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ನಾ, ಅರುಣ್ ಶೌರಿ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕೂಡ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ದೂರು ಸಲ್ಲಿಸಿದ್ದರು.
ಇಂದು ತೀರ್ಪು ಪ್ರಕಟಿಸಿರುವ ನ್ಯಾಯಪೀಠ ತನಿಖೆಗೆ ಅಸಮ್ಮತಿ ಸೂಚಿಸಿದ್ದು, ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿದೆ. ವಿಮಾನ ಖರೀದಿ ಪ್ರಕ್ರಿಯೆಯು ನಮಗೆ ತೃಪ್ತಿಯನ್ನು ತಂದಿದೆ. ಒಪ್ಪಂದ ಕುರಿತು ಯಾವುದೇ ರೀತಿಯ ಸಂಶಯಗಳೂ ಮೂಡುತ್ತಿಲ್ಲ. ಯಾವುದೇ ರೀತಿಯ ಸಿದ್ಥತೆಗಳಿಲ್ಲದೆ ಒಂದು ದೇಶ ಇರಲು ಸಾಧ್ಯವಿಲ್ಲ. 126 ಯುದ್ಧ ವಿಮಾನಗಳನ್ನೇ ಖರೀದಿ ಮಾಡುವಂತೆ ಸರ್ಕಾರಕ್ಕೆ ನಾವು ಒತ್ತಾಯ ಮಾಡಲು ಸಾಧ್ಯವಿಲ್ಲ. ಪ್ರತೀಯೊಂದು ಭಾಗದಲ್ಲೂ ಅಂಶಗಳಲ್ಲೂ ನ್ಯಾಯಾಲಯ ಪರಿಶೀಲನೆ ನಡೆಸುವುದು ಸರಿಯಲ್ಲ. ಬೆಲೆ ಹೋಲಿಕೆ ಮಾಡುವುದು ನ್ಯಾಯಾಲಯದ ಕೆಲಸವೂ ಅಲ್ಲ ಎಂದು ಹೇಳಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…