Featured

ರಫೇಲ್ ಹಗರಣ : ಕಾಂಗ್ರೆಸ್‌ ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಪ್ರಧಾನಿ ಮೋದಿಗೆ ಸಾತ್ ನೀಡಿದ ​ಎನ್‌ಸಿಪಿ ನೇತಾರ ಶರದ್ ಪವಾರ್

ಮುಂಬಯಿ: ರಫೇಲ್‌ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಎನ್‌ಸಿಪಿ ನೇತಾರ ಶರದ್‌ ಪವಾರ್‌ ಅವರು ಪ್ರಧಾನಿ ಮೋದಿಯ ನೆರವಿಗೆ ಧಾವಿಸಿದ್ದಾರೆ. 

ರಫೇಲ್‌ ವಿಮಾನ ಖರೀದಿ ವಿಚಾರದಲ್ಲಿ ಮೋದಿ ಅವರ ಉದ್ದೇಶದ ಬಗ್ಗೆ ಜನರಿಗೆ ಯಾವುದೇ ಅನುಮಾನವಿಲ್ಲ ಎಂದು ಪವಾರ್‌ ಹೇಳಿದ್ದಾರೆ. 

ಮರಾಠಿ ನ್ಯೂಸ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ರಕ್ಷಣಾ ಸಚಿವ ಪವಾರ್‌, ವಿಪಕ್ಷಗಳು ಫೈಟರ್‌ ಜೆಟ್‌ಗಳಿಗೆ ಸಂಬಂಧಿಸಿದ ಟೆಕ್ನಿಕಲ್‌ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುತ್ತಿರುವುದಕ್ಕೆ ಅರ್ಥವೇ ಇಲ್ಲ. ವಿಮಾನಗಳ ಬೆಲೆ ಬಹಿರಂಗಪಡಿಸುವುದರಿಂದ ಸರಕಾರಕ್ಕೆ ಏನೂ ತೊಂದರೆಯಾಗುವುದಿಲ್ಲ ಎಂದು ಹೇಳಿದರು.

ಆದರೆ ಈ ವಿಚಾರದಲ್ಲಿ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಸರಕಾರದ ಪರವಾಗಿ ಮಂಡಿಸಿರುವ ವಿಚಾರಗಳು ಜನರಲ್ಲಿ ಗೊಂದಲ ಹುಟ್ಟಿಸಿವೆ. ನಿರ್ಮಲಾ ಅವರ ಬದಲು ಹಣಕಾಸು ಸಚಿವ ಅರುಣ್‌ ಜೇಟ್ಲಿ ಈ ಬಗ್ಗೆ ಸರಕಾರದ ನಿಲುವನ್ನು ಪ್ರಕಟಿಸಬಹುದು ಎಂದು ಶರದ್‌ ಪವಾರ್‌ ಹೇಳಿದರು.

ರಫೇಲ್‌ ಖರೀದಿಯಲ್ಲಿ ಪ್ರಧಾನಿ ಮೋದಿ ನಿಯಮ ಉಲ್ಲಂಘಿಸಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಸರಕಾರದ ಖಜಾನೆಗೆ ನಷ್ಟವುಂಟು ಮಾಡುವ ಜತೆಗೆ ರಾಷ್ಟ್ರೀಯ ಭದ್ರತೆಗೂ ಧಕ್ಕೆ ತರಲಾಗಿದೆ ಎಂಬುದು ವಿಪಕ್ಷಗಳ ಆರೋಪವಾಗಿದೆ.

ಮೋದಿ ವಿರೋಧಿಗಳ ಮಹಾ ಒಕ್ಕೂಟದಲ್ಲಿ ಪ್ರಮುಖ ನಾಯಕರಾಗಿರುವ ಶರತ್ ಪವಾರ್ ಅವರ ಈ ಹೇಳಿಕೆ ಅಕ್ಷರಶಃ ವಿರೋಧ ಪಕ್ಷಗಳಿಗೆ ಆಘಾತವನ್ನು ಉಂಟು ಮಾಡಿದೆ.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago