Featured

ರಫೇಲ್ ಹಗರಣ : ಕಾಂಗ್ರೆಸ್‌ ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಪ್ರಧಾನಿ ಮೋದಿಗೆ ಸಾತ್ ನೀಡಿದ ​ಎನ್‌ಸಿಪಿ ನೇತಾರ ಶರದ್ ಪವಾರ್

ಮುಂಬಯಿ: ರಫೇಲ್‌ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಎನ್‌ಸಿಪಿ ನೇತಾರ ಶರದ್‌ ಪವಾರ್‌ ಅವರು ಪ್ರಧಾನಿ ಮೋದಿಯ ನೆರವಿಗೆ ಧಾವಿಸಿದ್ದಾರೆ. 

ರಫೇಲ್‌ ವಿಮಾನ ಖರೀದಿ ವಿಚಾರದಲ್ಲಿ ಮೋದಿ ಅವರ ಉದ್ದೇಶದ ಬಗ್ಗೆ ಜನರಿಗೆ ಯಾವುದೇ ಅನುಮಾನವಿಲ್ಲ ಎಂದು ಪವಾರ್‌ ಹೇಳಿದ್ದಾರೆ. 

ಮರಾಠಿ ನ್ಯೂಸ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ರಕ್ಷಣಾ ಸಚಿವ ಪವಾರ್‌, ವಿಪಕ್ಷಗಳು ಫೈಟರ್‌ ಜೆಟ್‌ಗಳಿಗೆ ಸಂಬಂಧಿಸಿದ ಟೆಕ್ನಿಕಲ್‌ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುತ್ತಿರುವುದಕ್ಕೆ ಅರ್ಥವೇ ಇಲ್ಲ. ವಿಮಾನಗಳ ಬೆಲೆ ಬಹಿರಂಗಪಡಿಸುವುದರಿಂದ ಸರಕಾರಕ್ಕೆ ಏನೂ ತೊಂದರೆಯಾಗುವುದಿಲ್ಲ ಎಂದು ಹೇಳಿದರು.

ಆದರೆ ಈ ವಿಚಾರದಲ್ಲಿ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಸರಕಾರದ ಪರವಾಗಿ ಮಂಡಿಸಿರುವ ವಿಚಾರಗಳು ಜನರಲ್ಲಿ ಗೊಂದಲ ಹುಟ್ಟಿಸಿವೆ. ನಿರ್ಮಲಾ ಅವರ ಬದಲು ಹಣಕಾಸು ಸಚಿವ ಅರುಣ್‌ ಜೇಟ್ಲಿ ಈ ಬಗ್ಗೆ ಸರಕಾರದ ನಿಲುವನ್ನು ಪ್ರಕಟಿಸಬಹುದು ಎಂದು ಶರದ್‌ ಪವಾರ್‌ ಹೇಳಿದರು.

ರಫೇಲ್‌ ಖರೀದಿಯಲ್ಲಿ ಪ್ರಧಾನಿ ಮೋದಿ ನಿಯಮ ಉಲ್ಲಂಘಿಸಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಸರಕಾರದ ಖಜಾನೆಗೆ ನಷ್ಟವುಂಟು ಮಾಡುವ ಜತೆಗೆ ರಾಷ್ಟ್ರೀಯ ಭದ್ರತೆಗೂ ಧಕ್ಕೆ ತರಲಾಗಿದೆ ಎಂಬುದು ವಿಪಕ್ಷಗಳ ಆರೋಪವಾಗಿದೆ.

ಮೋದಿ ವಿರೋಧಿಗಳ ಮಹಾ ಒಕ್ಕೂಟದಲ್ಲಿ ಪ್ರಮುಖ ನಾಯಕರಾಗಿರುವ ಶರತ್ ಪವಾರ್ ಅವರ ಈ ಹೇಳಿಕೆ ಅಕ್ಷರಶಃ ವಿರೋಧ ಪಕ್ಷಗಳಿಗೆ ಆಘಾತವನ್ನು ಉಂಟು ಮಾಡಿದೆ.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

17 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago