ಮುಂಬಯಿ: ರಫೇಲ್ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಎನ್ಸಿಪಿ ನೇತಾರ ಶರದ್ ಪವಾರ್ ಅವರು ಪ್ರಧಾನಿ ಮೋದಿಯ ನೆರವಿಗೆ ಧಾವಿಸಿದ್ದಾರೆ.
ರಫೇಲ್ ವಿಮಾನ ಖರೀದಿ ವಿಚಾರದಲ್ಲಿ ಮೋದಿ ಅವರ ಉದ್ದೇಶದ ಬಗ್ಗೆ ಜನರಿಗೆ ಯಾವುದೇ ಅನುಮಾನವಿಲ್ಲ ಎಂದು ಪವಾರ್ ಹೇಳಿದ್ದಾರೆ.
ಮರಾಠಿ ನ್ಯೂಸ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ರಕ್ಷಣಾ ಸಚಿವ ಪವಾರ್, ವಿಪಕ್ಷಗಳು ಫೈಟರ್ ಜೆಟ್ಗಳಿಗೆ ಸಂಬಂಧಿಸಿದ ಟೆಕ್ನಿಕಲ್ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುತ್ತಿರುವುದಕ್ಕೆ ಅರ್ಥವೇ ಇಲ್ಲ. ವಿಮಾನಗಳ ಬೆಲೆ ಬಹಿರಂಗಪಡಿಸುವುದರಿಂದ ಸರಕಾರಕ್ಕೆ ಏನೂ ತೊಂದರೆಯಾಗುವುದಿಲ್ಲ ಎಂದು ಹೇಳಿದರು.
ಆದರೆ ಈ ವಿಚಾರದಲ್ಲಿ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಸರಕಾರದ ಪರವಾಗಿ ಮಂಡಿಸಿರುವ ವಿಚಾರಗಳು ಜನರಲ್ಲಿ ಗೊಂದಲ ಹುಟ್ಟಿಸಿವೆ. ನಿರ್ಮಲಾ ಅವರ ಬದಲು ಹಣಕಾಸು ಸಚಿವ ಅರುಣ್ ಜೇಟ್ಲಿ ಈ ಬಗ್ಗೆ ಸರಕಾರದ ನಿಲುವನ್ನು ಪ್ರಕಟಿಸಬಹುದು ಎಂದು ಶರದ್ ಪವಾರ್ ಹೇಳಿದರು.
ರಫೇಲ್ ಖರೀದಿಯಲ್ಲಿ ಪ್ರಧಾನಿ ಮೋದಿ ನಿಯಮ ಉಲ್ಲಂಘಿಸಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಸರಕಾರದ ಖಜಾನೆಗೆ ನಷ್ಟವುಂಟು ಮಾಡುವ ಜತೆಗೆ ರಾಷ್ಟ್ರೀಯ ಭದ್ರತೆಗೂ ಧಕ್ಕೆ ತರಲಾಗಿದೆ ಎಂಬುದು ವಿಪಕ್ಷಗಳ ಆರೋಪವಾಗಿದೆ.
ಮೋದಿ ವಿರೋಧಿಗಳ ಮಹಾ ಒಕ್ಕೂಟದಲ್ಲಿ ಪ್ರಮುಖ ನಾಯಕರಾಗಿರುವ ಶರತ್ ಪವಾರ್ ಅವರ ಈ ಹೇಳಿಕೆ ಅಕ್ಷರಶಃ ವಿರೋಧ ಪಕ್ಷಗಳಿಗೆ ಆಘಾತವನ್ನು ಉಂಟು ಮಾಡಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]