ಮುಂಬಯಿ: ರಫೇಲ್ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಎನ್ಸಿಪಿ ನೇತಾರ ಶರದ್ ಪವಾರ್ ಅವರು ಪ್ರಧಾನಿ ಮೋದಿಯ ನೆರವಿಗೆ ಧಾವಿಸಿದ್ದಾರೆ.
ರಫೇಲ್ ವಿಮಾನ ಖರೀದಿ ವಿಚಾರದಲ್ಲಿ ಮೋದಿ ಅವರ ಉದ್ದೇಶದ ಬಗ್ಗೆ ಜನರಿಗೆ ಯಾವುದೇ ಅನುಮಾನವಿಲ್ಲ ಎಂದು ಪವಾರ್ ಹೇಳಿದ್ದಾರೆ.
ಮರಾಠಿ ನ್ಯೂಸ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ರಕ್ಷಣಾ ಸಚಿವ ಪವಾರ್, ವಿಪಕ್ಷಗಳು ಫೈಟರ್ ಜೆಟ್ಗಳಿಗೆ ಸಂಬಂಧಿಸಿದ ಟೆಕ್ನಿಕಲ್ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುತ್ತಿರುವುದಕ್ಕೆ ಅರ್ಥವೇ ಇಲ್ಲ. ವಿಮಾನಗಳ ಬೆಲೆ ಬಹಿರಂಗಪಡಿಸುವುದರಿಂದ ಸರಕಾರಕ್ಕೆ ಏನೂ ತೊಂದರೆಯಾಗುವುದಿಲ್ಲ ಎಂದು ಹೇಳಿದರು.
ಆದರೆ ಈ ವಿಚಾರದಲ್ಲಿ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಸರಕಾರದ ಪರವಾಗಿ ಮಂಡಿಸಿರುವ ವಿಚಾರಗಳು ಜನರಲ್ಲಿ ಗೊಂದಲ ಹುಟ್ಟಿಸಿವೆ. ನಿರ್ಮಲಾ ಅವರ ಬದಲು ಹಣಕಾಸು ಸಚಿವ ಅರುಣ್ ಜೇಟ್ಲಿ ಈ ಬಗ್ಗೆ ಸರಕಾರದ ನಿಲುವನ್ನು ಪ್ರಕಟಿಸಬಹುದು ಎಂದು ಶರದ್ ಪವಾರ್ ಹೇಳಿದರು.
ರಫೇಲ್ ಖರೀದಿಯಲ್ಲಿ ಪ್ರಧಾನಿ ಮೋದಿ ನಿಯಮ ಉಲ್ಲಂಘಿಸಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಸರಕಾರದ ಖಜಾನೆಗೆ ನಷ್ಟವುಂಟು ಮಾಡುವ ಜತೆಗೆ ರಾಷ್ಟ್ರೀಯ ಭದ್ರತೆಗೂ ಧಕ್ಕೆ ತರಲಾಗಿದೆ ಎಂಬುದು ವಿಪಕ್ಷಗಳ ಆರೋಪವಾಗಿದೆ.
ಮೋದಿ ವಿರೋಧಿಗಳ ಮಹಾ ಒಕ್ಕೂಟದಲ್ಲಿ ಪ್ರಮುಖ ನಾಯಕರಾಗಿರುವ ಶರತ್ ಪವಾರ್ ಅವರ ಈ ಹೇಳಿಕೆ ಅಕ್ಷರಶಃ ವಿರೋಧ ಪಕ್ಷಗಳಿಗೆ ಆಘಾತವನ್ನು ಉಂಟು ಮಾಡಿದೆ.
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…
ಹಿಜಾಬ್ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ…
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…