Featured

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ : ವಿಚಾರಣೆಯನ್ನು ಅ. 7ಕ್ಕೆ ಮುಂದೂಡಿದ ಹೈಕೋರ್ಟ್‌ -Vishwanews24

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ : ವಿಚಾರಣೆಯನ್ನು ಅ. 7ಕ್ಕೆ ಮುಂದೂಡಿದ ಹೈಕೋರ್ಟ್‌ -Vishwanews24

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರದ್ದು ಎನ್ನಲಾಗಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಅಕ್ಟೋಬರ್‌ 7ಕ್ಕೆ ಮುಂದೂಡಿದೆ.

ಎಸ್‌ಐಟಿ ತಂಡ ರಚಿಸಿ ನಗರ ಪೊಲೀಸ್‌ ಆಯುಕ್ತರು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ, ಸಂತ್ರಸ್ತ ಯುವತಿ ಸೇರಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ನಡೆಸಿದೆ.

ಹೈಕೋರ್ಟ್‌ ಅನುಮತಿ ಇಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನಡೆಸಿರುವ ತನಿಖೆಯ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ. ಹೀಗಾಗಿ ಹೈಕೋರ್ಟ್‌ ನ ಮುಂದಿನ ಆದೇಶಕ್ಕೆ ಒಳಪಟ್ಟು ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಬೇಕು. ಈ ಸಂಬಂಧ ನ್ಯಾಯಾಲಯ ಹಿಂದೆ ಹೊರಡಿಸಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕೆಂದು ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ ಮನವಿ ಮಾಡಿದರು.

ಇನ್ನು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್‌, ಎಸ್‌ಐಟಿ ರಚನೆಯ ಸಿಂಧುತ್ವವನ್ನೇ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಒಂದು ವೇಳೆ ನ್ಯಾಯಾಲಯ ಎಸ್‌ಐಟಿ ರಚನೆಯನ್ನೇ ಅಸಿಂಧುಗೊಳಿಸಿದರೆ, ಎಲ್ಲವೂ ನಿರರ್ಥಕವಾಗಲಿದೆ. ಆದ್ದರಿಂದ ಎಸ್‌ಐಟಿ ರಚನೆಯ ಕಾನೂನಾತ್ಮಕ ಮತ್ತು ಸಾಂವಿಧಾನಿಕ ಸಿಂಧುತ್ವವನ್ನು ನಿರ್ಧಾರ ಮಾಡಬೇಕಿದೆ ಎಂದರು.

ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಅನುಮತಿ ನೀಡುವ ಮುನ್ನ ಅನೇಕ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದ್ದು ವಿಚಾರಣೆಯನ್ನು ಅ.7ಕ್ಕೆ ಮುಂದೂಡಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

8 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

9 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

9 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

10 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

11 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

11 hours ago