Featured

ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ನಮ್ಮ ಸಹಮತವಿದೆ : ಸಚಿವ ಆರ್. ಅಶೋಕ್ -Vishwanews24

ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ನಮ್ಮ ಸಹಮತವಿದೆ..

ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಶ್ರಮ ಸಾಕಷ್ಟಿದೆ : ಸಚಿವ ಆರ್. ಅಶೋಕ್

ಹಾಸನ: ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ನಮ್ಮ ಸಹಮತವಿದೆ. ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಶ್ರಮ ಸಾಕಷ್ಟಿದೆ. ಈಗ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಪಕ್ಷದಲ್ಲಿ ಸಮನ್ವಯತೆ ಇಲ್ಲ. ಪಕ್ಷದ ರೈಲು ಇನ್ನೂ ಟ್ರ್ಯಾಕ್ ಗೆ ಇಳಿದಿಲ್ಲ. ಕೇಂದ್ರದಲ್ಲೂ ಸಹ ಸಮರ್ಥ ವಿರೋಧ ಪಕ್ಷದ ನಾಯಕರು ಇಲ್ಲದೆ ತಬ್ಬಿಬ್ಬಾಗಿದೆ. ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ನಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಜಾತಿ ರಾಜಕೀಯದಲ್ಲಿ ತೊಡಗಿರುವ ಪಕ್ಷದಲ್ಲಿ ಸಂವಿಧಾನ ಬದಲಾವಣೆ ಮೂಲಕ ಜಾತಿಗೊಂದರಂತೆ ಸಿಎಂ ಕುರ್ಚಿಯನ್ನು ಸೃಷ್ಟಿ ಮಾಡಬೇಕು ಅಷ್ಟೇ. ಅದು ಸಹ ಕಷ್ಟ ಸಾಧ್ಯ ಆದ್ದರಿಂದ ಕಾಂಗ್ರೆಸ್ ರಾಜ್ಯದಲ್ಲಿ ಮುಂದಿನ 20 ವರ್ಷ ಅಧಿಕಾರಕ್ಕೆ ಬರುವುದು ಸುಳ್ಳು ಎಂದು ಭವಿಷ್ಯ ನುಡಿದರು.

ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಾಗಿದ್ದ ಅವಧಿಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿದರು ಎಂದು ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರ ಜಗಳವನ್ನು ಪ್ರೇಕ್ಷಕರಾಗಿ ನೋಡುತ್ತಿದ್ದೇವೆ. ನಮ್ಮ ಬಿಜೆಪಿ ಸರ್ಕಾರದಿಂದ ಕೇವಲ ಅಭಿವೃದ್ಧಿಯ ಮಂತ್ರ ಜಪ ಮಾಡಲಾಗುತ್ತಿದ್ದು, ಕೊರೊನಾ ಹತೋಟಿ, ಲಸಿಕೆ ಕಾರ್ಯಕ್ರಮ ಯಶಸ್ಸಿಗೆ ಹಾಗೂ ಜನರ ಆರ್ಥಿಕ ಸುಧಾರಣೆಗೆ ಕೆಲಸ ಮಾಡುತ್ತಿದ್ದೇವೆ ಎಂದರು ..

ಎರಡು ವರ್ಷ ಬಿಎಸ್‍ವೈ ಸಿಎಂ:

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿರುವ ಯಡಿಯೂರಪ್ಪ ಅವರು ಮುಂದಿನ ಮೂರನೇ ಅಲೆಯನ್ನು ಸಹ ಅವರ ನೇತೃತ್ವದಲ್ಲಿಯೇ ನಿರ್ವಹಣೆ ಮಾಡಲಾಗುವುದು ಹಾಗೂ 2 ವರ್ಷದವರೆಗೆ ಸಿಎಂ ಬದಲಾವಣೆ ಪ್ರಶ್ನೆ ಇಲ್ಲ ಎಂದು ಪುನರುಚ್ಚರಿಸಿದರು. ಮುಂದಿನ ಡಿಸೆಂಬರ್ ಒಳಗೆ ರಾಜ್ಯದ ಎಲ್ಲಾ ಜನರಿಗೆ 2 ಡೋಸ್ ಲಸಿಕೆ ಹಾಕಲು ತಯಾರಿ ಮಾಡುತ್ತಿದ್ದೇವೆ. ಕೊರೊನಾ ಮೂರನೇ ಅಲೆ ತಡೆಗಟ್ಟಲು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದು ಮುಂದಿನ ದಿನಗಳಲ್ಲಿ ಕಾರ್ಯಗತವಾಗಲಿದೆ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

5 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

5 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

6 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

7 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

7 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

8 hours ago