ಹಾಸನ: ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ನಮ್ಮ ಸಹಮತವಿದೆ. ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಶ್ರಮ ಸಾಕಷ್ಟಿದೆ. ಈಗ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಪಕ್ಷದಲ್ಲಿ ಸಮನ್ವಯತೆ ಇಲ್ಲ. ಪಕ್ಷದ ರೈಲು ಇನ್ನೂ ಟ್ರ್ಯಾಕ್ ಗೆ ಇಳಿದಿಲ್ಲ. ಕೇಂದ್ರದಲ್ಲೂ ಸಹ ಸಮರ್ಥ ವಿರೋಧ ಪಕ್ಷದ ನಾಯಕರು ಇಲ್ಲದೆ ತಬ್ಬಿಬ್ಬಾಗಿದೆ. ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ನಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಜಾತಿ ರಾಜಕೀಯದಲ್ಲಿ ತೊಡಗಿರುವ ಪಕ್ಷದಲ್ಲಿ ಸಂವಿಧಾನ ಬದಲಾವಣೆ ಮೂಲಕ ಜಾತಿಗೊಂದರಂತೆ ಸಿಎಂ ಕುರ್ಚಿಯನ್ನು ಸೃಷ್ಟಿ ಮಾಡಬೇಕು ಅಷ್ಟೇ. ಅದು ಸಹ ಕಷ್ಟ ಸಾಧ್ಯ ಆದ್ದರಿಂದ ಕಾಂಗ್ರೆಸ್ ರಾಜ್ಯದಲ್ಲಿ ಮುಂದಿನ 20 ವರ್ಷ ಅಧಿಕಾರಕ್ಕೆ ಬರುವುದು ಸುಳ್ಳು ಎಂದು ಭವಿಷ್ಯ ನುಡಿದರು.
ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಾಗಿದ್ದ ಅವಧಿಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿದರು ಎಂದು ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರ ಜಗಳವನ್ನು ಪ್ರೇಕ್ಷಕರಾಗಿ ನೋಡುತ್ತಿದ್ದೇವೆ. ನಮ್ಮ ಬಿಜೆಪಿ ಸರ್ಕಾರದಿಂದ ಕೇವಲ ಅಭಿವೃದ್ಧಿಯ ಮಂತ್ರ ಜಪ ಮಾಡಲಾಗುತ್ತಿದ್ದು, ಕೊರೊನಾ ಹತೋಟಿ, ಲಸಿಕೆ ಕಾರ್ಯಕ್ರಮ ಯಶಸ್ಸಿಗೆ ಹಾಗೂ ಜನರ ಆರ್ಥಿಕ ಸುಧಾರಣೆಗೆ ಕೆಲಸ ಮಾಡುತ್ತಿದ್ದೇವೆ ಎಂದರು ..
ಎರಡು ವರ್ಷ ಬಿಎಸ್ವೈ ಸಿಎಂ:
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿರುವ ಯಡಿಯೂರಪ್ಪ ಅವರು ಮುಂದಿನ ಮೂರನೇ ಅಲೆಯನ್ನು ಸಹ ಅವರ ನೇತೃತ್ವದಲ್ಲಿಯೇ ನಿರ್ವಹಣೆ ಮಾಡಲಾಗುವುದು ಹಾಗೂ 2 ವರ್ಷದವರೆಗೆ ಸಿಎಂ ಬದಲಾವಣೆ ಪ್ರಶ್ನೆ ಇಲ್ಲ ಎಂದು ಪುನರುಚ್ಚರಿಸಿದರು. ಮುಂದಿನ ಡಿಸೆಂಬರ್ ಒಳಗೆ ರಾಜ್ಯದ ಎಲ್ಲಾ ಜನರಿಗೆ 2 ಡೋಸ್ ಲಸಿಕೆ ಹಾಕಲು ತಯಾರಿ ಮಾಡುತ್ತಿದ್ದೇವೆ. ಕೊರೊನಾ ಮೂರನೇ ಅಲೆ ತಡೆಗಟ್ಟಲು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದು ಮುಂದಿನ ದಿನಗಳಲ್ಲಿ ಕಾರ್ಯಗತವಾಗಲಿದೆ ಎಂದು ಸ್ಪಷ್ಟಪಡಿಸಿದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…