ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸದಂತೆ ಅವರ ಅಭಿಮಾನಿಗಳು ಹೋರಾಟ ನಡೆಸುತ್ತಿದ್ದು, ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಅಲ್ಲದೆ ಗೋಕಾಕ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಗೋಕಾಕ್ನ ಬಸವ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಭಿಮಾನಿಗಳು, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಮೇಶ ಜಾರಕಿಹೊಳಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕವನ್ನು ಸಹ ಇದೇ ವೇಳೆ ಮಾಡಿದ್ದಾರೆ.
ಗೋಕಾಕ್ ನಗರಸಭೆ ಸದಸ್ಯರು ಸೇರಿದಂತೆ ನೂರಾರು ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ರಾಜೀನಾಮೆ ಅಂಗೀಕರಿಸದಂತೆ ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ಅಂಗೀಕರಿಸಿದರೆ ಬಿಜೆಪಿ ಹೈಕಮಾಂಡ್ಗೆ ವಿರುದ್ಧವೇ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಜಿಲ್ಲೆ ಬಂದ್ ಮಾಡಿ, ಉಗ್ರ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.
ರಮೇಶ್ ಜಾರಕಿಹೊಳಿಯವರನ್ನು ಸಚಿವ ಸ್ಥಾನದಿಂದ ತೆಗೆದಿದ್ದಕ್ಕೆ ಅವರ ಬೆಂಬಲಿಗರು ಆಕ್ರೋಶಗೊಂಡಿದ್ದು, ಬಲವಂತವಾಗಿ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಗೋಕಾಕ್ನಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದೆ.
ಗೋಕಾಕ್ ನಗರದ ಅಂಗಡಿ ಮುಂಗಟ್ಟುಗಳನ್ನು ಬೆಂಬಲಿಗರು ಬಂದ್ ಮಾಡುತ್ತಿದ್ದು, ಅಂಗಡಿಗಳನ್ನು ಮುಚ್ಚುವಂತೆ ಒತ್ತಾಯಪೂರ್ವಕವಾಗಿ ಗಲಾಟೆ ಮಾಡುತ್ತಿದ್ದಾರೆ. ಹೀಗಾಗಿ ಗೋಕಾಕ್ ನಗರದ ಅಂಗಡಿಗಳು ಸಂಪೂರ್ಣ ಬಂದ್ ಆಗಿವೆ. ಜಾರಕಿಹೊಳಿ ಬೆಂಬಲಿಗರಿಂದ ಬಸವ ವೃತ್ತದಲ್ಲಿ ಪ್ರತಿಭಟನೆ ಮುಂದುವರಿದಿದೆ. ಪೊಲೀಸರು ಮಾತ್ರ ಅಸಹಾಯಕರಾಗಿ ನಿಂತಿದ್ದಾರೆ.
ಬಿಜೆಪಿ ಹೈಕಮಾಂಡ್ ವಿರುದ್ಧ ಜಾರಕಿಹೊಳಿ ಬೆಂಬಲಿಗರು ಗುಡಗಿದ್ದು, ಸಚಿವ ಸ್ಥಾನದಿಂದ ವಜಾ ಮಾಡಿದರೆ ಹೈ ಕಮಾಂಡ್ ವಿರುದ್ಧವೇ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸಚಿವ ರಮೇಶ್ ಜಾರಕಿಹೊಳಿ ಮನೆ ಎದುರು ನೂರಾರು ಬೆಂಬಲಿಗರು ಜಮಾಯಿಸಿದ್ದಾರೆ. ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಬೇಕು. ಒಂದು ವೇಳೆ ಪಕ್ಷ ಸಚಿವ ಸ್ಥಾನದಿಂದ ವಜಾ ಮಾಡಿದರೆ ಹೈಕಮಾಂಡ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಜಾರಕಿಹೊಳಿ ಬೆಂಬಲಿಗರು ಹೇಳಿದ್ದಾರೆ
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…