Featured

ರಮೇಶ್ ಜಾರಕಿಹೊಳಿ ರಾಜೀನಾಮೆ : ಗೋಕಾಕ್ ಬಂದ್ ಮಾಡಿ ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆ ನಡೆಸುತ್ತಿರುವ ಬೆಂಬಲಿಗರು -Vishwanews24

ರಮೇಶ್ ಜಾರಕಿಹೊಳಿ ರಾಜೀನಾಮೆ : ಗೋಕಾಕ್ ಬಂದ್ ಮಾಡಿ ಪೆಟ್ರೋಲ್ ಸುರಿದುಕೊಂಡು ಪ್ರತಿಭಟನೆ ನಡೆಸುತ್ತಿರುವ ಬೆಂಬಲಿಗರು -Vishwanews24

ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸದಂತೆ ಅವರ ಅಭಿಮಾನಿಗಳು ಹೋರಾಟ ನಡೆಸುತ್ತಿದ್ದು, ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಅಲ್ಲದೆ ಗೋಕಾಕ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಗೋಕಾಕ್‍ನ ಬಸವ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಭಿಮಾನಿಗಳು, ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಮೇಶ ಜಾರಕಿಹೊಳಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕವನ್ನು ಸಹ ಇದೇ ವೇಳೆ ಮಾಡಿದ್ದಾರೆ.

ಗೋಕಾಕ್ ನಗರಸಭೆ ಸದಸ್ಯರು ಸೇರಿದಂತೆ ನೂರಾರು ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ರಾಜೀನಾಮೆ ಅಂಗೀಕರಿಸದಂತೆ ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ಅಂಗೀಕರಿಸಿದರೆ ಬಿಜೆಪಿ ಹೈಕಮಾಂಡ್‍ಗೆ ವಿರುದ್ಧವೇ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಜಿಲ್ಲೆ ಬಂದ್ ಮಾಡಿ, ಉಗ್ರ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.

ರಮೇಶ್ ಜಾರಕಿಹೊಳಿಯವರನ್ನು ಸಚಿವ ಸ್ಥಾನದಿಂದ ತೆಗೆದಿದ್ದಕ್ಕೆ ಅವರ ಬೆಂಬಲಿಗರು ಆಕ್ರೋಶಗೊಂಡಿದ್ದು, ಬಲವಂತವಾಗಿ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಗೋಕಾಕ್‍ನಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದೆ.

ಗೋಕಾಕ್ ನಗರದ ಅಂಗಡಿ ಮುಂಗಟ್ಟುಗಳನ್ನು ಬೆಂಬಲಿಗರು ಬಂದ್ ಮಾಡುತ್ತಿದ್ದು, ಅಂಗಡಿಗಳನ್ನು ಮುಚ್ಚುವಂತೆ ಒತ್ತಾಯಪೂರ್ವಕವಾಗಿ ಗಲಾಟೆ ಮಾಡುತ್ತಿದ್ದಾರೆ. ಹೀಗಾಗಿ ಗೋಕಾಕ್ ನಗರದ ಅಂಗಡಿಗಳು ಸಂಪೂರ್ಣ ಬಂದ್ ಆಗಿವೆ. ಜಾರಕಿಹೊಳಿ ಬೆಂಬಲಿಗರಿಂದ ಬಸವ ವೃತ್ತದಲ್ಲಿ ಪ್ರತಿಭಟನೆ ಮುಂದುವರಿದಿದೆ. ಪೊಲೀಸರು ಮಾತ್ರ ಅಸಹಾಯಕರಾಗಿ ನಿಂತಿದ್ದಾರೆ.

ಬಿಜೆಪಿ ಹೈಕಮಾಂಡ್ ವಿರುದ್ಧ ಜಾರಕಿಹೊಳಿ ಬೆಂಬಲಿಗರು ಗುಡಗಿದ್ದು, ಸಚಿವ ಸ್ಥಾನದಿಂದ ವಜಾ ಮಾಡಿದರೆ ಹೈ ಕಮಾಂಡ್ ವಿರುದ್ಧವೇ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸಚಿವ ರಮೇಶ್ ಜಾರಕಿಹೊಳಿ ಮನೆ ಎದುರು ನೂರಾರು ಬೆಂಬಲಿಗರು ಜಮಾಯಿಸಿದ್ದಾರೆ. ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಬೇಕು. ಒಂದು ವೇಳೆ ಪಕ್ಷ ಸಚಿವ ಸ್ಥಾನದಿಂದ ವಜಾ ಮಾಡಿದರೆ ಹೈಕಮಾಂಡ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಜಾರಕಿಹೊಳಿ ಬೆಂಬಲಿಗರು ಹೇಳಿದ್ದಾರೆ

Vishwa News 24

Recent Posts

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 minutes ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

14 minutes ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

26 minutes ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

34 minutes ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

54 minutes ago

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

1 hour ago