ಮೈಸೂರು : ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ವ್ಯವಹಾರ ನಡೆದಿದೆ. ಪ್ರಕರಣದಲ್ಲಿ ದೊಡ್ಡ ದೊಡ್ಡವರ ಕೈವಾಡವಿದೆ. ಕಳೆದ ಮೂರು ತಿಂಗಳಿಂದ ಈ ಡೀಲ್ ನಡೆದಿದೆ. ಪ್ರಕರಣದ ತನಿಖೆಯನ್ನು ಮಾಡಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
ರಮೇಶ್ ಜಾರಕಿಹೊಳಿ ಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಉದ್ದೇಶದಿಂದ ಸಿಡಿ ಬ್ಲಾಕ್ ಮೇಲ್ ಮಾಡಲಾಗಿದೆ. ಇದೀಗ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಸಫಲರಾಗಿದ್ದಾರೆ.
ನಾನು ಈ ಪ್ರಕರಣವನ್ನು ನೋಡಿ ಖುಷಿ ಪಡುವವನಲ್ಲ. ನಾನು ಒಂದು ಕಲ್ಲು ಹೊಡೆಯಬೇಕು ಎಂದು ಹೊಡೆಯಲ್ಲ.ನನಗೆ ತಿಳಿದುಬಂದಿರುವ ಮೂಲಗಳ ಮಾಹಿತಿ ಪ್ರಕಾರ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…