ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.
ಆದರೆ ಎಸ್ ಐ ಟಿ ರಚನೆ ಪ್ರಶ್ನಿಸಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಏಕಸದಸ್ಯ ಪೀಠಕ್ಕೆ ವರ್ಗಾಯಿಸಿದೆ. ಇದರಿಂದಾಗಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿ ಎರಡೂ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದವು.
ಇದನ್ನೂ ಓದಿ :
ವಿಚಾರಣೆ ನಡೆಸಿದ ನ್ಯಾಯಪೀಠ, ಎಸ್ ಐಟಿ ರಚನೆ ಪ್ರಶ್ನಿಸಿ ಪಿಐಎಲ್ ಹೂಡಲಾಗಿದೆ. ಆದರೆ ಸಂತ್ರಸ್ತೆಯೇ ಅದೇ ಎಸ್ಐಟಿ ರಚನೆ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಕಾರಣ ಪಿಐಎಲ್ ಅರ್ಜಿಯನ್ನು ಉಳಿಸಿಕೊಳ್ಳುವ ಅಗತ್ಯ ಏನೂ ಇಲ್ಲ ಎಂದು ಅಭಿಪ್ರಾಯಪಟ್ಟು ಇತ್ಯರ್ಥಪಡಿಸಿತು.
ಜೊತೆಗೆ ಸಂತ್ರಸ್ತೆ ಅರ್ಜಿಯನ್ನು ಏಕಸದಸ್ಯಪೀಠಕ್ಕೆ ವರ್ಗಾಯಿಸಿದ ವಿಭಾಗೀಯ ನ್ಯಾಯಪೀಠ, ಅರ್ಜಿಯನ್ನು ರೋಸ್ಟರ್ ಪ್ರಕಾರ ಸಂಬಂಧಪಟ್ಟ ನ್ಯಾಯಪೀಠ ಮುಂದೆಗೆ ವಿಚಾರಣೆಗೆ ನಿಗದಿಪಡಿಸಲು ಆದೇಶಿಸಿತು. ಸಂತ್ರಸ್ತೆಯು ಸಲ್ಲಿಸಿರುವ ಮತ್ತೊಂದು ಅರ್ಜಿಯನ್ನು ನ್ಯಾಯಪೀಠವೇ ವಿಚಾರಣೆ ಮುಂದುವರಿಸಲಿದೆ. ಅಲ್ಲದೆ, ನ್ಯಾಯಪೀಠ ಪಿಐಎಲ್ ಅಲ್ಲಿ ಸಲ್ಲಿಸಲಾಗಿರುವ ಅಗತ್ಯ ದಾಖಲೆಗಳನ್ನು ರೋಸ್ಟರ್ ನ್ಯಾಯಪೀಠಕ್ಕೆ ಒದಗಿಸುವ ಉದ್ದೇಶದಿಂದ ಪಿಐಎಲ್ ಅನ್ನು ಸಂತ್ರಸ್ತೆಯ ಅರ್ಜಿಯೊಂದಿಗೆ ಸೇರಿಸಬಹುದು ಎಂದು ತಿಳಿಸಿದೆ.
ಇದನ್ನೂ ಓದಿ :
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…