Featured

ರಮೇಶ್ ಜಾರಕೊಹೊಳಿ ಅವರನ್ನು ಬಂಧಿಸುವಂತೆ ಕಾಂಗ್ರೆಸ್‌ ಪ್ರತಿಭಟನೆ : ಮಿಥುನ್‌ ರೈ, ನಲಪಾಡ್ ‌ಸೇರಿದಂತೆ ಹಲವರು ಪೊಲೀಸ್‌ ವಶಕ್ಕೆ -Vishwanews24

ರಮೇಶ್ ಜಾರಕೊಹೊಳಿ ಅವರನ್ನು ಬಂಧಿಸುವಂತೆ ಕಾಂಗ್ರೆಸ್‌ ಪ್ರತಿಭಟನೆ : ಮಿಥುನ್‌ ರೈ, ನಲಪಾಡ್ ‌ಸೇರಿದಂತೆ ಹಲವರು ಪೊಲೀಸ್‌ ವಶಕ್ಕೆ -Vishwanews24

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕೊಹೊಳಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಮುಖಂಡ ನಲಪಾಡ್, ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರತಿಭಟನೆಗೂ ಮುನ್ನ ಮಾತನಾಡಿದ್ದ ನಲಪಾಡ್‌, “ಸಾಮಾನ್ಯ ವ್ಯಕ್ತಿ ಈ ರೀತಿ ಮಾಡಿದ್ದರೆ, ‌ಈ ವೇಳೆಗಾಗಲೇ ಆತನ ಬಂಧನವಾಗುತ್ತಿತ್ತು. ಆದರೆ, 24 ದಿನ ಕಳೆದರೂ ರಮೇಶ್‌ ಜಾರಕಿಹೊಳಿ ಅವರನ್ನು ಏಕೆ ಬಂಧಿಸಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಡಿಕೆಶಿ ಅವರಿಗೆ ಹೇಗೆ ಮಾಡಿದ್ದೀರಿ ಅದೇ ರೀತಿ ನಾವು ಕೂಡಾ ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಪಶ್ಚಿಮ ಬಂಗಾಳದಲ್ಲಿ ಈ ಬಾರಿ 200 ಕ್ಕೂ ಅಧಿಕ ಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ : ಅಮಿತ್ ಶಾ -Vishwanews24

ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯ ಬಳಿ ಯುವ ಕಾಂಗ್ರೆಸ್ ಮುಖಂಡ ನಲಪಾಡ್, ಮಿಥುನ್ ರೈ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನ ನಡೆಸುತ್ತಿದ್ದು, ಈ ಸಂದರ್ಭ ಬೈಕ್‌ ರ್‍ಯಾಲಿ ಮುಖೇನ ಆಗಮಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಮುರಿದು ಠಾಣೆಯೊಳಗೆ ನುಗ್ಗಲು ಯತ್ನಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್‌ ಠಾಣೆಯ ಎದುರು ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಮೊಹಮ್ಮದ್ ನಲಪಾಡ್, ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ :ಸಿಡಿ ಪ್ರಕರಣ : ಸಂತ್ರಸ್ತೆ ಬಂದು ದೂರು ನೀಡುವವರೆಗೂ ಯಾರನ್ನೂ ಬಂಧಿಸಲು ಆಗಲ್ಲ: ಪ್ರಹ್ಲಾದ್‌ ಜೋಶಿ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

12 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

13 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

13 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

13 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago