Featured

ರಷ್ಯಾದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಚರ್ಚ್‌ ಮೇಲೆ ದಾಳಿ : ಪಾದ್ರಿ,ನಾಗರಿಕರು, 15 ಪೊಲೀಸ್ ಅಧಿಕಾರಿಗಳ ಹತ್ಯೆ – vishwanews24

ರಷ್ಯಾದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಚರ್ಚ್‌ ಮೇಲೆ ದಾಳಿ : ಪಾದ್ರಿ,ನಾಗರಿಕರು, 15 ಪೊಲೀಸ್ ಅಧಿಕಾರಿಗಳ ಹತ್ಯೆ

ಮಾಸ್ಕೋ: ರಷ್ಯಾದ ಡಾಗೆಸ್ತಾನ್‌ನಲ್ಲಿ ಅಪರಿಚಿತ ಬಂಧೂಕುದಾರಿಗಳು ಸಿನಗಾಗ್, ಆರ್ಥೊಡಾಕ್ಸ್ ಚರ್ಚ್‌ಗಳು ಹಾಗೂ ಪೊಲೀಸ್ ಪೋಸ್ಟ್‌ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಥೊಡಾಕ್ಸ್ ಚರ್ಚ್‌ನ ಪಾದ್ರಿ, ನಾಗರಿಕರು ಹಾಗೂ ಕನಿಷ್ಠ 15 ಮಂದಿ ಪೊಲೀಸ್‌ ಅಧಿಕಾರಿಗಳನ್ನು  ಹತ್ಯೆಗೈದಿರುವ ಘಟನೆ ನಡೆದಿದೆ.

ಕಳೆದ ಮೂರ‍್ನಾಲ್ಕು ತಿಂಗಳ ಹಿಂದೆಯಷ್ಟೇ ಮಾಸ್ಕೋ ಬಳಿಯ ಸಂಗೀತ ಕಛೇರಿ ಹಾಲ್ ಮೇಲೆ ಇಸ್ಲಾಮಿಕ್ ಸ್ಟೇಟ್ ನಡೆಸಿದ ದಾಳಿಯಲ್ಲಿ 145 ಜನ ಸಾವನ್ನಪ್ಪಿದ್ದರು. ಇದೀಗ ಉತ್ತರ ಕಾಕಸಸ್‌ನ ಮಖಚ್ಕಲಾ ಮತ್ತು ಡರ್ಬೆಂಟ್ ನಗರಗಳಾದ್ಯಂತ ಅಂತಹದ್ದೇ ದಾಳಿಗಳು ಸಂಭವಿಸಿದೆ. ದಾಳಿಯ ಕೆಲವೇ ಸಮಯದಲ್ಲಿ ಮಖಚ್ಕಲಾದಲ್ಲಿ ನಾಲ್ವರು ಮತ್ತು ಡರ್ಬೆಂಟ್‌ನಲ್ಲಿ ಇಬ್ಬರು ಬಂದೂಕುಧಾರಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.

ಡಾಗೆಸ್ತಾನ್‌ನ ಅತಿದೊಡ್ಡ ನಗರ ಮಖಚ್ಕಲಾ ಮತ್ತು ಕರಾವಳಿ ನಗರ ಡರ್ಬೆಂಟ್‌ನಲ್ಲಿ ಏಕಕಾಲದಲ್ಲಿ ದಾಳಿಗಳು ನಡೆದಿದ್ದು, ಇದು ದೇಶಕ್ಕೆ ಕರಾಳ ದಿನವಾಗಿದೆ. ಅಲ್ಲದೇ ಈ ದಾಳಿಯನ್ನು ಭಯೋತ್ಪಾದಕ ದಾಳಿ ಎಂದು ಗವರ್ನರ್ ಸೆರ್ಗೆಯ್ ಮೆಲಿಕೋವ್ ತಿಳಿಸಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿಯೂ ಸೋಮವಾರ (ಇಂದು) ವೀಡಿಯೋ ಮೂಲಕ ತಿಳಿಸಿದ್ದಾರೆ.

ಈ ಭಯೋತ್ಪಾದಕ ದಾಳಿ ಹಿಂದೆ ಯಾರಿದ್ದಾರೆ? ಅವರು ಯಾವ ಉದ್ದೇಶ ಹೊಂದಿದ್ದಾರೆ? ಅನ್ನೋದು ಸ್ಪಷ್ಟವಾಗಿದೆ ಎಂದು ಪರೋಕ್ಷವಾಗಿ ಉಕ್ರೇನ್‌ ವಿರುದ್ಧ ಟೀಕಿಸಿದ್ದಾರೆ. ದಾಳಿ ಹಿಂದೆ ಯಾರಿದ್ದಾರೆ ಅನ್ನೋದನ್ನ ಕಂಡುಹಿಡಿಯಲು ಅಧಿಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಡಾಗೆಸ್ತಾನ್​ ಸರ್ಕಾರ ಜೂನ್ 24ರಿಂದ 26ರ ವರೆಗೆ ಶೋಕಾಚರಣೆ ಘೋಷಿಸಿ ಆದೇಶ ಹೊರಡಿಸಿದೆ. ರಾಷ್ಟ್ರ ಧ್ವಜಗಳನ್ನು ಅರ್ಧಕ್ಕೆ ಇಳಿಸಲಾಗಿದೆ ಮತ್ತು ಎಲ್ಲ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಘಟನಾ ಸಂಬಂಧ ರಷ್ಯಾದ ತನಿಖಾ ಸಮಿತಿಯು ಈ ಶಂಕಿತ ಭಯೋತ್ಪಾದಕ ಕೃತ್ಯಗಳ ತನಿಖೆ ಪ್ರಾರಂಭಿಸಿದೆ. ಆದಾಗ್ಯೂ ದಾಳಿಯ ಜವಾಬ್ದಾರಿಯನ್ನು ತಕ್ಷಣಕ್ಕೆ ಯಾವ ಸಂಘಟನೆಯೂ ದಾಳಿಯ ಹೊಣೆ ವಹಿಸಿಕೊಂಡಿಲ್ಲ. ದಾಳಿಕೋರರಲ್ಲಿ ಮಧ್ಯ ಡಾಗೆಸ್ತಾನ್‌ನ ಸೆರ್ಗೋಕಲಾ ಜಿಲ್ಲೆಯ ಮುಖ್ಯಸ್ಥರ ಇಬ್ಬರು ಪುತ್ರರು ಸೇರಿದ್ದಾರೆ ಎಂದು ರಷ್ಯಾದ ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

17 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago