ನವದೆಹಲಿ: ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಸಭೆ ನಡೆಸಲು ನನಗೆ ಅವಕಾಶ ನೀಡಿಲ್ಲ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಸತ್ ಭವನದ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಮಾನ್ಯವಾಗಿ, ಭಾರತಕ್ಕೆ ಯಾರೇ ಭೇಟಿ ನೀಡಿದರೂ ಅವರ ಜೊತೆ ಪ್ರತಿಪಕ್ಷದ ನಾಯಕರು ಸಭೆ ನಡೆಸುವುದು ಶಿಷ್ಟಾಚಾರ. ಇದು ವಾಜಪೇಯಿ, ಮನಮೋಹನ್ ಸಿಂಗ್ ಸರ್ಕಾರದಲ್ಲಿ ನಡೆಯುತ್ತಿತ್ತು. ಆದರೆ ಈಗ ಈ ಶಿಷ್ಟಾಚಾರ ಪಾಲನೆಯಾಗುತ್ತಿಲ್ಲ ಎಂದು ದೂರಿದರು.
ನಾನು ವಿದೇಶಕ್ಕೆ ಹೋದಾಗ ವಿಪಕ್ಷ ನಾಯಕನನ್ನು ಭೇಟಿ ಮಾಡಬಾರದು ಎಂದು ಅವರು ಸೂಚಿಸುತ್ತಾರೆ. ನಾವು ಭಾರತವನ್ನು ಪ್ರತಿನಿಧಿಸುತ್ತೇವೆ. ಆದರೆ ಈ ಸರ್ಕಾರ ನಾವು ವಿದೇಶಿ ಗಣ್ಯರನ್ನು ಭೇಟಿ ಮಾಡಲು ಬಯಸುವುದಿಲ್ಲ. ಅಭದ್ರತೆಯ ಕಾರಣದಿಂದಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ಶಿಷ್ಟಾಚಾರವನ್ನು ಅನುಸರಿಸುತ್ತಿಲ್ಲ ಎಂದು ಹೇಳಿದರು.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು ಇಂದು ಸಂಜೆ ದೆಹಲಿಗೆ ಬಂದಿಳಿಯಲಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…