ದೆಹಲಿ : ಉಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟಿನ ಸಂದರ್ಭದಲ್ಲಿ ತನ್ನ ಪ್ರಜೆಗಳ ರಕ್ಷಣೆಗೆ ಮುಂದಾದ ಭಾರತ ಉಕ್ರೇನ್ ನಲ್ಲಿರುವ ಭಾರತೀಯರನ್ನು ಮರಳಿ ತಾಯ್ನಾಡಿಗೆ ಕರೆತರುತ್ತಿದೆ. ಫೆ. 22 ರಂದು ಉಕ್ರೇನ್ ನಿಂದ 242 ಭಾರತೀಯರನ್ನು ಹೊತ್ತ ಏರ್ ಇಂಡಿಯಾ ರಾತ್ರಿ ವೇಳೆಗೆ ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತಲುಪಿರುವ ಬಗ್ಗೆ ಏರ್ ಇಂಡಿಯಾ ಪ್ರಕಟಣೆ ಹೊರಡಿಸಿದೆ.
ಉಕ್ರೇನ್ ನಲ್ಲಿರುವ ಭಾರತೀಯರನ್ನು ವಾಪಸ್ ಕರೆತರಲು ಮಂಗಳವಾರ ಮುಂಜಾನೆ 7.30ಕ್ಕೆ, ದೆಹಲಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ವಿಮಾನ ಹೊರಟಿತ್ತು. ಸುಮಾರು 242 ಪ್ರಯಾಣಿಕರನ್ನು ಒಳಗೊಂಡ ಈ ವಿಮಾನ ಕೈವ್ ನಿಂದ ಸಂಜೆ 5.40ಕ್ಕೆ ಟೇಕ್ ಆಫ್ ಆಯಿತು. ರಾತ್ರಿ 10.15ರ ಹೊತ್ತಿಗೆ ದೆಹಲಿ ತಲುಪಿದೆ ಎಂದು ಮಾಹಿತಿ ನೀಡಿದೆ.
ಸದ್ಯ ಒಂದು ವಿಮಾನ ಭಾರತೀಯರನ್ನು ಕರೆತಂದಿದ್ದು, ಇನ್ನೊಂದು ಫ್ಲೈಟ್ ಗುರುವಾರ ಹಾಗೂ ಮತ್ತೊಂದು ವಿಮಾನ ಶನಿವಾರ ಉಕ್ರೇನ್ ನಿಂದ ಭಾರತೀಯರನ್ನು ಕರೆ ತರಲಿದೆ.
ಏರ್ ಇಂಡಿಯಾ ಈ ಹಿಂದೆ ಉಕ್ರೇನ್ ಗೆ ಯಾವುದೇ ವಾಣಿಜ್ಯ ವಿಮಾನ ಕಾರ್ಯಾಚರಣೆ ನಡೆಸಿರಲಿಲ್ಲ. ಇದೀಗ ಏರ್ ಇಂಡಿಯಾ ವಿಮಾನ ಸಂಚಾರ ಪ್ರಾರಂಭ ಮಾಡಿದ ಬೆನ್ನಲ್ಲೇ, ಭಾರತದ ಇತರ ವಿಮಾನ ಆಪರೇಟರ್ ಗಳೂ ಕೂಡ ಆಸಕ್ತಿ ತೋರಿಸುತ್ತಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…