ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಸಂಭವನೀಯ ಆಕ್ರಮಣದ ಭೀತಿ ಹೆಚ್ಚಿದೆ. ಹೀಗಾಗಿ ಆತಂಕವಿರುವ ಪ್ರದೇಶಗಳಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ಟಾಟಾ ಒಡೆತನದ ಏರ್ ಇಂಡಿಯಾ ಇಂದು ರಾತ್ರಿ ಉಕ್ರೇನ್ ತಲುಪಲಿದೆ.
ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ಭಾರತ ಸರ್ಕಾರ ಮುಂದಾಗಿದೆ. ಉಕ್ರೇನ್ನಲ್ಲಿ ನೆಲೆಸಿರುವ ಭಾರತೀಯರು ಸುರಕ್ಷಿತವಾಗಿ ಹಿಂದಿರುಗಲು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ.
ಏರ್ ಇಂಡಿಯಾದ ಎಐ-1946 ಮೊದಲ ವಿಶೇಷ ವಿಮಾನದಲ್ಲಿ ಭಾರತೀಯ ಪ್ರಜೆಗಳು ಇಂದು ರಾತ್ರಿ ತವರು ದೇಶಕ್ಕೆ ಮರಳಲಿದ್ದಾರೆ ಎಂದು ಏರ್ಲೈನ್ ಮೂಲಗಳು ತಿಳಿಸಿವೆ. ಏರ್ ಇಂಡಿಯಾ ಫೆರ್ರಿ ವಿಮಾನವು ಸೋಮವಾರ ಉಕ್ರೇನ್ನಿಂದ ಭಾರತೀಯರನ್ನು ವಾಪಸ್ ಕರೆತಂದಿತ್ತು. ಏರ್ ಇಂಡಿಯಾದ ಮೂರು ವಿಮಾನಗಳು ಈ ಕಾರ್ಯಾಚರಣೆಯಲ್ಲಿವೆ.
ಇದನ್ನೂ ಓದಿ :
ಏರ್ ಇಂಡಿಯಾದ ಮೂರು ವಿಮಾನಗಳು ಫೆ.22, 24 ಮತ್ತು 26ರಂದು ಭಾರತ ಮತ್ತು ಉಕ್ರೇನ್ ನಡುವೆ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿಸಲಾಗಿದೆ. ಉಕ್ರೇನ್ಗೆ ವಿಶೇಷ ಕಾರ್ಯಾಚರಣೆಯ ಭಾಗವಾಗಿ ದೆಹಲಿಯಿಂದ ಬೋಯಿಂಗ್ ಡ್ರೀಮ್ಲೈನರ್ ಎಐ-1947 ವಿಮಾನವು ಟೇಕ್ ಆಫ್ ಆಗಿದೆ. ಇದು 200ಕ್ಕೂ ಹೆಚ್ಚು ಆಸನಗಳ ಸಾಮರ್ಥ್ಯವನ್ನು ಹೊಂದಿದೆ.
ರಷ್ಯಾದೊಂದಿಗೆ ಉಕ್ರೇನ್ ಗಡಿಯಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಿಶೇಷ ಸಭೆಯಲ್ಲಿ ಪರಸ್ಪರ ಸೌಹಾರ್ದಯುತ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕಡೆಯವರು ಅತ್ಯಂತ ಸಂಯಮ ಮತ್ತು ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡಬೇಕು ಎಂದು ಬಲವಾಗಿ ಪ್ರತಿಪಾದಿಸಿತ್ತು.
ಇದನ್ನೂ ಓದಿ :
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…