ಚೆನ್ನೈ: ಭಾರತೀಯ ಸೇನೆಯಿಂದ ಎರಡು ಬಾರಿ ತಿರಸ್ಕೃತಗೊಂಡ ತಮಿಳುನಾಡಿನ 21 ವರ್ಷದ ಯುವಕನೋರ್ವ ಇದೀಗ ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಸೇನೆಗೆ ಸೇರಿದ್ದಾನೆ.
ತಮಿಳುನಾಡಿನ ಸೈನಿಕೇಶ್ ರವಿಚಂದ್ರನ್ ಅವರೇ ಉಕ್ರೇನ್ ಪ್ಯಾರಾಮಿಲಿಟರಿ ಪಡೆಗೆ ಸೇರ್ಪಡೆಗೊಂಡ ಯುವಕ.
ಯುವಕ ಉಕ್ರೇನ್ ಸೇನೆ ಸೇರಿರುವ ಕುರಿತು ಮಾಹಿತಿ ಬಂದ ತತ್ ಕ್ಷಣ ಅಧಿಕಾರಿಗಳು ಆತನ ಮನೆಗೆ ಭೇಟಿ ನೀಡಿದ್ದು, ಪೋಷಕರಲ್ಲಿ ವಿಚಾರಿಸಿದ್ದಾರೆ. ಆತ ಭಾರತೀಯ ಸೇನೆ ಸೇರಲು ಎರಡು ಬಾರಿ ಅರ್ಜಿ ಸಲ್ಲಿಸಿದ್ದು, ಎರಡು ಸಲವೂ ತಿರಸ್ಕರಿಸಲಾಗಿತ್ತು. ಆದರೆ ಆತನಿಗೆ ಸೇನೆ ಸೇರಲೇಬೇಕೆಂಬ ಮಹದಾಸೆ ಇತ್ತು ಎಂದು ಪೋಷಕರು ತಿಳಿಸಿದ್ದಾರೆ.
ಸೈನಿಕೇಶ್ 2018ರಲ್ಲಿ ಯುಕ್ರೇನ್ ಗೆ ತೆರಳಿದ್ದು, ಖಾರ್ಕೀವ್ ನಲ್ಲಿರುವ ರಾಷ್ಟ್ರೀಯ ಅಂತರಿಕ್ಷಯಾನ ವಿವಿಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಈ ಜುಲೈ ವೇಳೆಗೆ ವಿದ್ಯಾಭ್ಯಾಸ ಪೂರ್ಣಗೊಳ್ಳುವುದರಲ್ಲಿತ್ತು. ಇದೀಗ ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಸೇನೆ ಸೇರಿರುವುದಾಗಿ ಆತ ಪೋಷಕರಿಗೆ ಮಾಹಿತಿ ನೀಡಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…