ಉಡುಪಿ: ಯುವತಿಯನ್ನು ಚುಡಾಯಿಸಿದವನಿಗೆ ಗ್ರಾಮದ ಯುವತಿಯರು ಹಾಗೂ ಮಹಿಳೆಯರು ಧರ್ಮದೇಟು ನೀಡಿದ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.
ಕುಂದಾಪುರದ ಎಲ್ಐಸಿ ಕಾಲೋನಿಯ ಜಾವೇದ್ ಮಹಿಳೆಯರಿಂದ ಗೂಸಾ ತಿಂದ ವ್ಯಕ್ತಿ. ಜಾವೇದ್ ಪ್ರತಿ ದಿನ ಬೆಳಗ್ಗೆ ದಾರಿಯಲ್ಲಿ ಹೋಗುವ ಮಹಿಳೆಯರಿಗೆ ಚುಡಾಯಿಸುತ್ತಿದ್ದನು ಹಾಗೂ ಸೀಟಿ ಹೊಡೆದು ಕಣ್ಸನ್ನೆ ಮಾಡುತ್ತಿದ್ದನು. ಕೆಲವರ ಬಳಿ ಫೋನ್ ನಂಬರ್ ಕೂಡ ಕೇಳುತ್ತಿದ್ದ.
ಜಾವೇದ್ನನ್ನು ಕೆಲವು ತಿಂಗಳಿನಿಂದ ಸಹಿಸಿಕೊಂಡಿದ್ದ ಸ್ಥಳೀಯರು ಇಂದು ಸಿಡಿದೆದ್ದಿದ್ದರು. ಜಾವೇದ್ನ ಕಾಟ ಜಾಸ್ತಿಯಾದಾಗ ಬೆಳಗ್ಗೆ ದಾರಿಯಲ್ಲಿ ಹೋಗುವ ಯುವತಿಯರು, ಅವರ ತಾಯಂದಿರು ಸೇರಿ ಜಾವೇದ್ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಜಾವೇದ್ನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಎರಡೇಟು ಕೊಟ್ಟಿದ್ದಾರೆ.
ಸದ್ಯ ಮಹಿಳೆಯರಿಂದ ಪೆಟ್ಟು ತಿಂದ ಜಾವೇದ್ ಕ್ಷಮೆ ಕೇಳಿದ್ದಾನೆ. ಇನ್ನು ಚುಡಾಯಿಸಲ್ಲ, ಯಾರ ಸುದ್ದಿಗೂ ಬರಲ್ಲ ಅಂತ ಕೈಮುಗಿದು ಅಂಗಲಾಚಿದ್ದಾನೆ. ಅಷ್ಟಕ್ಕೆ ಸುಮ್ಮನಾಗದ ಮಹಿಳೆಯರು ಹಾಗೂ ಯುವತಿಯರು ಹೊಯ್ಸಳ ಪೊಲೀಸರನ್ನು ಸ್ಥಳಕ್ಕೆ ಕರೆಸಿ ಜಾವೆದ್ ನನ್ನು ಒಪ್ಪಿಸಿದ್ದಾರೆ.
ಹೊಯ್ಸಳ ವಾಹನದಲ್ಲಿ ಕುಂದಾಪುರ ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಜಾವೇದ್ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾವೇದ್ ಮನೆ ಕೂಡಾ ಎಲ್ಐಸಿ ರಸ್ತೆಯಲ್ಲೇ ಇದೆ. ಪರಿಚಿತರಿಗೇ ಈತ ಕಾಟ ಕೊಡುತ್ತಾನೆ ಎಂಬುದು ಸ್ಥಳೀಯರ ಆರೋಪಿಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…