ರಸ್ತೆಯಲ್ಲಿ ಕುಸಿದುಬಿದ್ದ ಅನಾಥ ವೃದ್ಧರೊಬ್ಬರಿಗೆ ನೀರು ಆಹಾರ ನೀಡಿ ಉಪಚರಿಸಿದ ಮಂಗಳೂರಿನ ಮಹಿಳಾ ಕಾನ್ಸ್ ಟೇಬಲ್
ಮಂಗಳೂರು, : ಬಿಸಿಲಿನ ಝಳ ಹಾಗೂ ಹಸಿವಿನಿಂದ ಬಸವಳಿದು ರಸ್ತೆ ಬದಿ ಬಿದ್ದ ಅನಾಥ ವೃದ್ದರೊಬ್ಬರಿಗೆ ನೀರು ಆಹಾರ ನೀಡಿ ಉಪಚರಿಸಿ ಮಾನವಿಯತೆ ಮೆರೆದ ಮಂಗಳೂರಿನ ಸಂಚಾರಿ ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಸಾರ್ವಜನಿಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ.
ಸುಮಾರು 60 – 65 ವರ್ಷದ ವೃದ್ಧರೊಬ್ಬರು ಜಪ್ಪಿನಮೊಗರು ನೇತ್ರಾವತಿ ಸೇತುವೆಯ ಮೇಲೆ ಹಸಿವಿನಿಂದ ದಾರಿ ಕಾಣದೆ ಕಂಗಲಾಗಿ ಬಿದ್ದಿದ್ದರು. ತಕ್ಷಣ ಇದನ್ನು ಗಮನಿಸಿದ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಭಾಗ್ಯಶ್ರೀ ವೃದ್ಧ ವ್ಯಕ್ತಿಯ ಸಹಾಯಕ್ಕೆ ಬಂದಿದ್ದಾರೆ. ಮಾತ್ರವಲ್ಲ, ಭಾಗ್ಯಶ್ರೀ ವೃದ್ಧ ವ್ಯಕ್ತಿಗೆ ಕುಡಿಯುಲು ನೀರು, ತಿನ್ನಲು ಆಹಾರ ನೀಡಿ ಉಪಚರಿಸಿದ್ದಾರೆ.
ನೀರು ಕುಡಿದು ಹಣ್ಣು ತಿಂದ ಬಳಿಕ ಆ ವ್ಯಕ್ತಿ ಸ್ವಲ್ಪ ಸುಧಾರಿಸಿಕೊಂಡಿದ್ದಾರೆ.ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರತಿಕ್ರೀಯಿಸಿರುವ ಭಾಗ್ಯಶ್ರೀ ಮನುಷ್ಯರಾಗಿ ಮನುಷ್ಯರಿಗೆ ಸಹಾಯ ಮಾಡುವುದು ನಮ್ಮ ಧರ್ಮ.ಇದರಲ್ಲಿ ಹೆಚ್ಚೇನೂ ಇಲ್ಲ ಎಂದು ಹೇಳುವ ಮೂಲಕ ತನ್ನ ಸರಳತೆ ಮತ್ತು ಮಾನವೀಯ ಪ್ರಜ್ಞೆಯನ್ನು ಮೆರೆದಿದ್ದಾರೆ.
ಭಾಗ್ಯಶ್ರೀ ಅವರ ಈ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…