ಲಕ್ನೋ : ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡುವುದನ್ನು ವಿರೋಧಿಸಿ ಹಿಂದೂ ಯುವ ವಾಹಿನಿ ಕಾರ್ಯಕರ್ತರು ರಸ್ತೆಯಲ್ಲಿಯೇ ಹನುಮಾನ್ ಚಾಲಿಸಾ ಪಠಣ ಮಾಡಿದ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ಸಿಂಕರಾ ರಾವ್ ಪಟ್ಟಣದಲ್ಲಿ ನಡೆದಿದೆ.
ಮಂಗಳವಾರ ಹಿಂದೂ ಯುವ ವಾಹಿನಿಯ ನೂರಾರು ಕಾರ್ಯಕರ್ತರು ರಸ್ತೆಯಲ್ಲಿಯೇ ನಿಂತು ಒಂದು ಗಂಟೆಗೂ ಹೆಚ್ಚು ಕಾಲ ಹನುಮಾನ್ ಚಾಲಿಸಾ ಪಠಣ ಮಾಡಿದ್ದಾರೆ. ಇದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು.
ಮುಸ್ಲಿಂ ಬಾಂಧವರು ಪ್ರತಿ ಶುಕ್ರವಾರ ರಸ್ತೆಯಲ್ಲಿ ನಮಾಜ್ ಮಾಡುತ್ತಾರೆ. ರಸ್ತೆಯಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸುವವರೆಗೂ ನಾವು ಪ್ರತಿ ಮಂಗಳವಾರ ರಸ್ತೆಯಲ್ಲಿ ಹನುಮಾನ ಚಾಲಿಸಾ ಪಠಣ ಮಾಡುತ್ತೇವೆ ಎಂದು ಹೇಳಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಪೊಲೀಸರು, ನಡು ರಸ್ತೆಯಲ್ಲಿ ನಮಾಜ್ ಮಾಡುವುದರಿಂದ ತೊಂದರೆಯಾಗಿದೆ ಎಂದು ಯಾರು ದೂರು ನೀಡಿಲ್ಲ. ಆದ್ದರಿಂದ ಈ ವಿಚಾರದಲ್ಲಿ ನಾವು ಮಧ್ಯಪ್ರದೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…