ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಸೂಪರ್ ಸ್ಟಾರ್ ರಿಯಾಲಿಟಿ ಶೋನ ಸ್ಪರ್ಧಿ ಸಮನ್ವಿ ಸಾವಿಗೆ ಲಾರಿ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದ ಲಾರಿ ಚಾಲಕ ಮಂಚೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಸಮನ್ವಿ ಮೃತದೇಹ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಿದ್ದು, ಪರೀಕ್ಷೆಯ ಬಳಿಕ ಆಸ್ಪತ್ರೆ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರವಾಗಲಿದೆ.
ಕನಕಪುರ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿರುವ ಅಮೃತ ನಾಯ್ಡು ಗುರುವಾರ ಸಂಜೆ ಹೋಂಡಾ ಆಕ್ಟಿವಾದಲ್ಲಿ ಮಗಳೊಂದಿಗೆ ಮನೆಯಿಂದ ಹೊರಗಡೆ ಹೊರಟಿದ್ದರು. ವಾಜರಹಳ್ಳಿ ಮೆಟ್ರೋ ಸ್ಟೇಶನ್ ಬಳಿ ಆಕ್ಟಿವಾ ಪಾರ್ಕ್ ಮಾಡಿ ಇಬ್ಬರೂ ಗಾಯತ್ರಿ ನಗರಕ್ಕೆ ಹೋಗಬೇಕಿತ್ತು. ಇದನ್ನೂ ಓದಿ: ನಟಿ ಅಮೃತಾ ನಾಯ್ಡು ಬಾಳಲ್ಲಿ ಪದೇ ಪದೇ ವಿಧಿಯಾಟ
ಮೆಟ್ರೋ ನಿಲ್ದಾಣಕ್ಕೆ 100 ಮೀ. ದೂರ ಇರುವಂತೆ ತಾಯಿ ಮಗಳು ಟಾಟಾ ಸುಮೋ ಹಾಗೂ ಲಾರಿ ಮಧ್ಯೆ ಸಿಲುಕಿದ್ದರು. ಟಿಪ್ಪರ್ ಲಾರಿ ಚಾಲಕ ಎಡಕ್ಕೆ ಗಾಡಿಯನ್ನು ತಿರುಗಿಸಿದ್ದಾನೆ. ಪರಿಣಾಮ ಎಡಭಾಗದ ಬಂಪರ್ ಡಿಕ್ಕಿ ಹೊಡೆದಿದ್ದರಿಂದ ಅಮೃತ ನಾಯ್ಡು ಮತ್ತು ಮನ್ವಿ ರಸ್ತೆಗೆ ಬಿದ್ದಿದ್ದಾರೆ. ಮಾನ್ವಿಯ ಸೊಂಟಕ್ಕೆ ಲಾರಿ ಬಂಪರ್ ಬಲವಾಗಿ ಗುದ್ದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾರ್ಗ ಮಧ್ಯೆ ಸಮನ್ವಿ ಮೃತಪಟ್ಟಿದ್ದಳು. ಕುಮಾರ ಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…