ಹನೂರು : ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹನೂರಿನ ಯುವಕನೋರ್ವನ ಅಂಗಾಂಗ ದಾನ ಮಾಡುವ ಮೂಲಕ ಆತನ ಹೆತ್ತವರು ನೋವಿನಲ್ಲೂ ಸಾರ್ಥಕತೆ ಮೆರೆದು ಮಾದರಿಯಾಗಿದ್ದಾರೆ.
ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾ ದಂಪತಿಯ ಪುತ್ರ ದರ್ಶನ್ ರಸ್ತೆ ಅಪಘಾತವಾದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತಲೆಗೆ ತೀವ್ರತರದ ಗಾಯಗಳಾಗಿದ್ದರಿಂದ ದರ್ಶನ್ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಅಲ್ಲಿನ ವೈದ್ಯರು ಘೋಷಿಸಿದರು. ಈ ಶೋಕದಲ್ಲೂ ದರ್ಶನ್ ಪೋಷಕರು ತಮ್ಮ ಪುತ್ರನ ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸಿ ಮಾನವೀಯತೆ ಮೆರೆದಿದ್ದಾರೆ.
ಅದರಂತೆ ಕಾರ್ಯಪ್ರವೃತ್ತರಾದ ವೈದ್ಯರು ಮೈಸೂರಿನ ಅಪೋಲೋ ಆಸ್ಪತ್ರೆಗೆ ದರ್ಶನ್ ಹೃದಯ ಮತ್ತು ಹೃದಯದ ನಾಳ, ಶ್ವಾಸಕೋಸ ನಾಶಗಳು, ಪಿತ್ತಕೋಶ(ಲಿವರ್), ಮೂತ್ರಪಿಂಡ(ಕಿಡ್ನಿ), ಕಣ್ಣುಗಳನ್ನು ರವಾನಿಸಿದರು.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…