ಬಂಟ್ವಾಳ,: ಪುತ್ತೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡರೊಬ್ಬರು ಮೃತಪಟ್ಟಿದ್ದಾರೆ.
ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿದ್ದ ವೆಂಕಟರಮಣ ಹೊಳ್ಳ (60) ಮೃತಪಟ್ಟವರು.
ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಕಡಬ ಬಳಿಯ ಪೋಳ್ಯದಲ್ಲಿ ಬೈಕ್ ರಸ್ತೆ ವಿಭಜಕಕ್ಕೆ ಢಿಕ್ಕೆ ಹೊಡೆದಿದೆ ಎಂದು ತಿಳಿದು ಬಂದಿದೆ.
ವೆಂಕಟ್ರಮಣ ಹೊಳ್ಳ ಅವರ ಮ್ರತ ದೇಹ ಘಟನೆಯ ತುಸು ದೂರ ಬಿದ್ದಿದ್ದು ಅವರ ತಲೆ ಜಜ್ಜಿ ಹೋಗಿದೆ. ವೆಂಕಟ್ರಮಣ ಹೊಳ್ಳ ಅವರು ಚಲಾಯಿಸುತ್ತಿದ್ದ ಬೈಕ್ಗೆ ಬೇರೆ ಯಾವುದೋ ವಾಹನ ಡಿಕ್ಕಿಯಾಗಿ ಹೋಗಿರಬಹುದೇ ಎಂಬ ಶಂಕೆಯು ವ್ಯಕ್ತವಾಗುತ್ತಿದೆ. ಪುತ್ತೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಆತ್ಮನಿರ್ಭರರಾಗುವ ಉದ್ಯೋಗ ತರಬೇತಿ ಆಯೋಜಿಸುವ ಮೂಲಕ ವೆಂಕಟರಮಣ ಹೊಳ್ಳ ಗಮನ ಸೆಳೆದಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…