Featured

ರಸ್ತೆ ಅಪಘಾತ : ಕಿರುತೆರೆ ಖ್ಯಾತ ನಟಿ ವೈಭವಿ ಉಪಾಧ್ಯಾಯ ದುರ್ಮರಣ – Vishwanews24

ರಸ್ತೆ ಅಪಘಾತ : ಕಿರುತೆರೆ ಖ್ಯಾತ ನಟಿ ವೈಭವಿ ಉಪಾಧ್ಯಾಯ ದುರ್ಮರಣ

ಭಾವಿ ಪತಿಯೊಂದಿಗೆ ಹಿಮಾಚಲ ಪ್ರದೇಶದ  ಪ್ರವಾಸದಲ್ಲಿದ್ದ ಖ್ಯಾತ ಕಿರುತೆರೆ ನಟಿ ವೈಭವಿ ಉಪಾಧ್ಯಾಯ ನಿಧನರಾಗಿದ್ದಾರೆ. ಪ್ರವಾಸ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಪರಿಣಾಮ ಅವರು ಕೊನೆಯುಸಿರೆಳೆದಿದ್ದಾರೆ. 32 ವಯಸ್ಸಿನ ವೈಭವಿ ಕಿರುತೆರೆ ಫೇಮಸ್ ನಟಿ. ಅಲ್ಲದೇ, ಇತ್ತೀಚೆಗೆ ಅವರು ಸಿನಿಮಾಗಳಲ್ಲೂ ನಟಿಸುತ್ತಿದ್ದರು.

ಹಿಂದಿಯ ಜನಪ್ರಿಯ ಕಿರುತೆರೆ ಶೋಗಳಾದ ‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ಸೇರಿದಂತೆ ಸಾಕಷ್ಟು ಶೋಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ನಟಿಸಿದ ಹೆಗ್ಗಳಿಕೆ ಇವರದ್ದು. ಹಿಂದಿ ಕಿರುತೆರೆಯಲ್ಲಿ ಜಾಸ್ಮೀನ್ ಎಂದೇ ಪರಿಚಿತರು. ಇದು ಅವರ ಪಾತ್ರದ ಹೆಸರಾಗಿತ್ತು. ‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ನಿರ್ಮಾಪಕ ಈ ಸುದ್ದಿಯನ್ನು ಖಚಿತ ಪಡಿಸುತ್ತಿದ್ದಂತೆಯೇ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ನಿನ್ನೆ ಈ ಘಟನೆ ಸಂಭವಿಸಿದ್ದು, ನಂತರ ಅವರ ಮೃತದೇಹವನ್ನು ಮುಂಬೈಗೆ ತರಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಇದೆ. ವೈಭವಿ ನಿಧನಕ್ಕೆ ಹಿಂದಿ ಕಿರುತೆರೆ ಅನೇಕರು ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೇ ಇತ್ತೀಚೆಗಷ್ಟೇ ಅವರು ದೀಪಿಕಾ ಪಡುಕೋಣೆ ನಟನೆ ಛಪಾಕ್ ಹಾಗೂ ತಿಮಿರ್ ಎನ್ನುವ ಚಿತ್ರದಲ್ಲೂ ನಟಿಸಿದ್ದರು. ಇದನ್ನೂ ಓದಿ:‘ರಾನಿ’ ಸಿನಿಮಾ ಸೆಟ್ ನಲ್ಲಿ ನಿರ್ದೇಶಕರ ಹುಟ್ಟುಹಬ್ಬ

‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ನಿರ್ದೇಶಕ ದೆವೆನ್ ಭೊಜನಿ ಸಂತಾಪ ವ್ಯಕ್ತ ಪಡಿಸಿದ್ದು, ‘ಶಾಕಿಂಗ್, ಅದ್ಭುತ ನಟಿ ಹಾಗೂ ಸ್ನೇಹಿತೆ ಕೆಲವೇ ಗಂಟೆಗಳ ಹಿಂದಷ್ಟೇ ಕಾರು ಅಪಘಾತವಾಗಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೊ’ ಎಂದು ಬರೆದುಕೊಂಡಿದ್ದಾರೆ. ನಟಿ ರೂಪಾ ಗಂಗೂಲಿ ಕೂಡ ಟ್ವೀಟ್ ಮಾಡಿ ‘ಇದು ಘೋರ ಅನ್ಯಾಯ. ನಂಬೋಕೆ ಆಗುತ್ತಿಲ್ಲ’ ಎಂದಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

18 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

35 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

44 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

1 hour ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

1 hour ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

1 hour ago