ನೆಲಮಂಗಲ: ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ.
ಸಿಂಚನ ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ನೆಲಮಂಗಲ ತಾಲೂಕಿನ ತೋಟನಹಳ್ಳಿ ಗ್ರಾಮದ ಮಂಜುನಾಥ್, ಸಿಂಚನ ದಂಪತಿ ಇಂದು ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಮನೆಗೆ ಸ್ಕೂಟರ್ನಲ್ಲಿ ವಾಪಸ್ ತೆರಳುವಾಗ ಹಿಂಬದಿಯಿಂದ ಲಾರಿ ಗುದ್ದಿದೆ.
ತುಮಕೂರು-ಬೆಂಗಳೂರು ರಸ್ತೆಯಲ್ಲಿ ಮನೆ ಕಡೆ ತೆರಳುವಾಗ ಹಿಂದುಗಡೆಯಿಂದ ಬಂದ ಜಲ್ಲಿ ತುಂಬಿದ ಲಾರಿ ಗುದ್ದಿದ ರಭಸಕ್ಕೆ ಸಿಂಚನ ಸ್ಕೂಟಿಯಿಂದ ಕೆಳಗಡೆ ಬಿದ್ದಿದ್ದಾರೆ. ಸಿಂಚನ ರಸ್ತೆಗೆ ಬಿದ್ದಿದ್ದು ಅವರ ಕಾರಿನ ಮೇಲೆ ಲಾರಿ ಚಕ್ರ ಹರಿದಿದೆ. ಪರಿಣಾಮ ಸಿಂಚನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಣ್ಣೆದುರೇ ಪತ್ನಿಯ ಸಾವು ಕಂಡು ಪತಿ ಮಂಜುನಾಥ್ ರಸ್ತೆಯಲ್ಲೇ ಕಣ್ಣೀರಿಟ್ಟಿದ್ದಾರೆ. ಲಾರಿ ಚಾಲಕ ಅತಿ ವೇಗ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…