Featured

ರಸ್ತೆ ಅಭಿವೃದ್ದಿಯ ನೆಪದಲ್ಲಿ ಮರಗಳನ್ನು ಕಡಿಯಬಾರದು : ಕಸ್ತೂರಿ ಕರ್ನಾಟಕ ಜನಪರ ವೇದಿಕೆ -Vishwanews24

ಮದ್ದೂರು: ಸಾಲುಮರದ ತಿಮ್ಮಕ್ಕ ಕೋಲಾರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಹಲಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳೆಸಿರುವ ಮರಗಳನ್ನು ಯಾವುದೇ ಕಾರಣಕ್ಕೂ ರಸ್ತೆ ಅಭಿವೃದ್ದಿಯ ನೆಪದಲ್ಲಿ ಮರಗಳನ್ನು ಕಡಿಯಬಾರದು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮರವನ್ನು ಅಪ್ಪಿಕೊಂಡು ವಿನೂತನ ಚಳವಳಿ ಮಾಡಿದರು.

ಸಾಲು ಮರದ ತಿಮ್ಮಕ್ಕನವರು ತಮ್ಮ ಮಕ್ಕಳಂತೆ ಹೆದ್ದಾರಿಯಲ್ಲಿ 274 ಮರಗಳನ್ನು ಕಷ್ಟಪಟ್ಟು ಬೆಳೆಸಿದ್ದಾರೆ. ರಸ್ತೆಗಳ ಅಭಿವೃದ್ಧಿಯ ನೆಪದಲ್ಲಿ ಮರಗಳನ್ನು ಕಡಿಯಬಾರದು ಎಂದು ಒತ್ತಾಯ ಮಾಡಿದರು.

ಈ ಕೂಡಲೇ ಸಿಎಂ ಕುಮಾರಸ್ವಾಮಿ ಅವರ ಆದೇಶದಂತೆ ಮರ ಕಡಿಯುವ ಉದ್ದೇಶ ಕೈ ಬಿಟ್ಟು ಪರ್ಯಾಯ ವ್ಯವಸ್ಥೆ ಮಾಡಲಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಟ್ಟಣದ ಪುರಸಭೆಯ ಅಧಿಕಾರಿಗಳು ಒಳಚರಂಡಿ ನೀರನ್ನು ಶಿಂಷಾನದಿಗೆ ಹಾಗೂ ಕೆಮ್ಮಣ್ಣುನಾಲೆಗೆ ಹರಿಸುತ್ತಿದ್ದಾರೆ. ಇದರಿಂದ ನೀರು ಕಲುಷಿತಗೊಳ್ಳುತ್ತಿದ್ದು. ಈ ನೀರನ್ನು ಕುಡಿಯಲು ಬಳಕೆ ಮಾಡುವ ಪ್ರಾಣಿ, ಪಕ್ಷಿಗಳಿಗೆ ಹಾಗೂ ದೈನಂದಿನ ಕಾರ್ಯಕ್ಕೆ ಬಳಸುವ ಜನರಿಗೆ ರೋಗ ರುಜಿನಗಳು ಬರುತ್ತಿದೆ. ಈ ಬಗ್ಗೆ ಪುರಸಭಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎಂದು ಒತ್ತಾಯ ಮಾಡಿದರು.

ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ಉಪಾಧ್ಯಕ್ಷ ಯರಗನಹಳ್ಳಿ ಮಹಲಿಂಗು, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಮುಖಂಡರಾದ ಉಮೇಶ್, ವೀರಪ್ಪ, ಶೀನಪ್ಪ, ಮಿಲ್ಷ್ಟಿಕುಮಾರ್, ಜಗದೀಶ್, ಸಾಗರ್, ಕುದರಗುಂಡಿ ನಾಗರಾಜು, ಜವನೇಗೌಡ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

2 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

2 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

2 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

3 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

3 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

3 hours ago