ಕಾರವಾರ: ತಾಲ್ಲೂಕಿನ ಕಡವಾಡ ವೈಲ ಮಕೇರಿ ರಸ್ತೆ ಬದಿಯಲ್ಲಿ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದು ಕೊಂಡಿದ್ದು ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸುವಾಗ ದಿನ ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರು ಆಗ್ರಹಿಸಿದ್ದಾರೆ.
ಕಡವಾಡ ಹಾಗೂ ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಮಕೇರಿ ಸುಲ್ತಾನಪುರ ಗಡಿಭಾಗದಲ್ಲಿ ನೂತನ ಸೇತುವೆಯ ಸಮೀಪದಿಂದ ರಸ್ತೆ ಬದಿಯುದ್ದಕೂ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದು ಕೊಂಡಿದ್ದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿನ ಮುಳ್ಳಿನ ಗಿಡಗಂಟಿಗಳು ಬೆಳೆದುಕೊಂಡು ರಸ್ತೆವರೆಗೂ ಆವರಿಸಿವೆ. ವಾಹನ ಸವಾರರ ಮೈ ಕೈ ಕಣ್ಣಿಗೆ ಬಡಿಯುತ್ತಿವೆ. ಮತ್ತು ಹಗಲು ರಾತ್ರಿ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು ಓಡಾಡುತ್ತಿದ್ದಾರೆ.
ಮತ್ತು ರಾತ್ರಿ ವೇಳೆಯಲ್ಲಿ ವಾಹನ ಸವಾರರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರು ಆಗ್ರಹಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…