Featured

ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್ ಸ್ಪೋಟ : ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ತಂದೆ ಮಗಳು ಸಾವು – Vishwanews24

ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್ ಸ್ಪೋಟ : ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ತಂದೆ ಮಗಳು ಸಾವು – Vishwanews24

ಬೆಂಗಳೂರು: ಬೆಂಗಳೂರಿನ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ತಂದೆ, ಮಗಳು ನಿನ್ನೆ ಮಧ್ಯಾಹ್ನ ಮಂಗನಹಳ್ಳಿ ಸೇತುವೆ ಮಾರ್ಗವಾಗಿ ತೆರಳುತ್ತಿದ್ದಾಗ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಆಯಿಲ್ ಸಿಡಿದು ಬೆಂಕಿ ಹೊತ್ತುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಗಳ ಮದುವೆ ಕಾರ್ಯಕ್ರಮವಿದ್ದ ಕಾರಣ ಕಲ್ಯಾಣ ಮಂಟಪ ಬುಕ್ ಮಾಡಿ ಹಿಂತಿರುಗುತ್ತಿದ್ದಾಗ ಅಪ್ಪ-ಮಗಳು ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಮಂಗನಹಳ್ಳಿ ಬ್ರಿಡ್ಜ್ ಬಳಿ ಸಡನ್ ಆಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಈ ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಭಸ್ಮವಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ತಂದೆ ಶಿವರಾಜು, ಮಗಳು ಚೈತನ್ಯರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದರು. ತಂದೆ ಶಿವರಾಜ್ (55) ಚೈತನ್ಯ(19) ಇಬ್ಬರೂ ಕೂಡಾ ಸಾವನ್ನಪ್ಪಿದ್ದಾರೆ.

ಬುಧವಾರ ಈ ಘಟನೆ ಸಂಬಂಧ ಶಿವರಾಜು ಸಂಬಂಧಿಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

53 minutes ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

1 hour ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…

1 hour ago

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು -vishwanews24

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…

2 hours ago

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು -vishwanews24

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…

3 hours ago