ಮಂಡ್ಯ: ರಸ್ತೆ ಹಂಪ್ ದಾಟುವಾಗ ಬೈಕ್ನಿಂದ ಕೈತಪ್ಪಿ ಬಿದ್ದು ಒಂದು ವರ್ಷದ ಕಂದಮ್ಮ ಸಾವನ್ನಪ್ಪಿದ ಘಟನೆ ಮಂಡ್ಯದ ಕಿರಂಗೂರು ಗ್ರಾಮದ ಬಳಿ ನಡೆದಿದೆ.
ಚಂದಗಾಲು ಗ್ರಾಮ ಶಿವಕುಮಾರ್ ಮತ್ತು ರಂಜಿತಾ ದಂಪತಿರ ಒಂದು ವರ್ಷದ ಮಗು ಮೃತ ದುರ್ದೈವಿ. ಶಿವಕುಮಾರ್ ದಂಪತಿ ಮದುವೆ ಕಾರ್ಯಕ್ರಮವನ್ನು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಕಿರಂಗದೂರು ಗ್ರಾಮದ ಸಮೀಪದಲ್ಲಿ ಶಿವಕುಮಾರ್ ತಮ್ಮ ಬೈಕನ್ನು ನಿಧಾನವಾಗಿ ಹಂಪ್ ಹತ್ತಿಸಿದ್ದಾರೆ. ರಂಜಿತಾ ಮಗುವನ್ನು ತೊಡೆಯ ಮೇಲೆ ಕೂರಿಸಿಕೊಂಡಿದ್ದರು. ಬೈಕ್ ಹಂಪ್ಸ್ ಹತ್ತಿದ ವೇಳೆ ಮಗು ರಂಜಿತಾ ಅವರ ಕೈಯಿಂದ ಜಾರಿ ರಸ್ತೆಗೆ ಬಿದ್ದಿದೆ. ಈ ವೇಳೆ ಮಗು ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಂದಮ್ಮ ಪ್ರಾಣಬಿಟ್ಟಿದೆ.
ಈ ಪ್ರಕರಣ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಗುವವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…