Featured

ರಾಕಿಂಗ್ ಸ್ಟಾರ್ ಯಶ್ ಕೊಲೆಗೆ ಸಂಚು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಪೋಟಕ ಮಾಹಿತಿ  ಲಭ್ಯವಾಗಿದೆ.

ಕುಖ್ಯಾತ ರೌಡಿ ಸೈಕಲ್ ರವಿಯೇ ನಟ ಯಶ್ ಹತ್ಯೆಗೆ ಸಂಚು ಮಾಡಿದ್ದ. ಪೊಲೀಸರ ವಿಚಾರಣೆ ವೇಳೆ 2 ವರ್ಷಗಳ ಹಿಂದೆಯೇ ನಟ ಯಶ್ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು ಎಂಬ ಆಘಾತ ಸುದ್ದಿಯನ್ನು ಬಾಯಿಬಿಟ್ಟಿದ್ದಾನೆ.

2016 ರಲ್ಲಿ ಬರ್ತ್ ಡೇ ಕಾರ್ಯಕ್ರಮಕ್ಕೆಂದು ಕನಕಪುರ ಫಾರ್ಮ್ ಹೌಸ್‍ ಗೆ ಹೋಗಿದ್ದರು. ಅಲ್ಲಿ ಸೈಕಲ್ ರವಿ ಹಾಗೂ ಕೋದಂಡ ಸ್ಕೆಚ್ ಯಶ್ ಕೊಲೆ ಮಾಡಲು  ಮಾಡಿದ್ದರು. ಕೋದಂಡನ ಮೂಲಕ ಯಶ್ ಅವರನ್ನು ಕೊಲ್ಲಲು ಸ್ಕೆಚ್ ಹಾಕಲಾಗಿತ್ತು. ಸ್ಕೆಚ್ ರೀತಿಯಲ್ಲಿ ಕುಡಿದ ಮತ್ತಿನಲ್ಲಿಯೇ ಯಶ್ ಕಾರಿನ ಮೇಲೆ ಪುಡಿ ರೌಡಿಗಳು ಕಲ್ಲು ತೂರಾಟ ಮಾಡಿದ್ದರು. ಆದರೆ ಅಂದು ಯಶ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.

ಅಂದು ಯಶ್ ಹತ್ಯೆಗೆ ಮೊತ್ತೊಬ್ಬ ನಟನ ಕೈವಾಡ ಇದೆ ಎಂದು ಆರೋಪ ಕೇಳಿಬಂದಿದೆ. ಆದರೆ ನಟನ ಸಂಚಿನ ಬಗ್ಗೆಯೂ ಪೊಲೀಸರು ತೀವ್ರ ತನಿಖೆ ಮಾಡುತ್ತಿದ್ದಾರೆ. ಸದ್ಯಕ್ಕೆ ತನಿಖೆಯ ಯಾವುದೇ ಮಾಹಿತಿಯನ್ನು ಪೊಲೀಸರು ಬಹಿರಂಗ ಪಡಿಸುತ್ತಿಲ್ಲ.

ಕೋದಂಡ ಯಾರು? ಸದ್ಯಕ್ಕೆ ಕೋದಂಡ ಎಲ್ಲಿದ್ದಾನೆ ಎಂಬ ಸುಳಿಯೂ ಸಿಗುತ್ತಿಲ್ಲ. ಅವನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಕೋದಂಡ ಹಲವು ಪ್ರಕರಣಗಲ್ಲಿ ಬೇಕಾಗಿರುವ ಆರೋಪಿಯಾಗಿದ್ದು, ಇದುವರೆಗೂ ಪೊಲೀಸರ ಬಲೆಗೆ ಬಿದ್ದಿಲ್ಲ. ಕೋದಂಡ ಮತ್ತು ಸೈಕಲ್ ರವಿ ಇಬ್ಬರು ರೌಡಿಗಳಾಗಿದ್ದು, ವಿರೋಧಿಗಳಾಗಿದ್ದರು. ಆದರೆ ಒಬ್ಬರನ್ನು ಮುಗಿಸುವ ಸಲುವಾಗಿ ಇಬ್ಬರು ರಾಜಿ ಮಾಡಿಕೊಂಡಿದ್ದರು.

ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದ ಹಿನ್ನೆಲೆಯಲ್ಲಿ ನಿರ್ಮಾಪಕ ಜಯಣ್ಣ ಅವರ ಜೊತೆ ಹೋಗಿ ಯಶ್ ಕಮಿಷನರ್ ಕಚೇರಿಗೆ ಹೋಗಿ ಯಶ್ ಮೌಖಿಕ ದೂರು ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ದೂರಿನ ಆಧಾರದ ಮೇಲೆ ಮೈಸೂರು ಕರ್ನಾಟಕ ಭಾಗದಲ್ಲಿ ಬೆಂಗಳೂರಿನ ಕೆಲವು ರೌಡಿಗಳನ್ನು ವಶಕ್ಕೆ ಪಡೆದ ವಿಚಾರಣೆ ಮಾಡಿದ್ದು, ಜೈಲಿಗೂ ಕಳುಹಿಸಿದ್ದರು.

ಹತ್ಯೆಯ ಸಂಚಿನ ಪ್ರಕರಣ ಬೆಳಕಿಗೆ ಬಂದ ನಂತರ ಯಶ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾನು ಈ ಬಗ್ಗೆ ಲೈವ್ ಆಗಿ ಮಾತನಾಡುತ್ತೇನೆ ಎಂದು ಯಶ್ ಹೇಳಿದ್ದಾರೆ. ಜೂನ್ 27 ರಂದು ಸಿಸಿಬಿ ಪೊಲೀಸರು ಶೂಟೌಟ್ ಮಾಡಿ ರೌಡಿ ಸೈಕಲ್ ರವಿಯನ್ನು ಬಂಧಿಸಿದ್ದರು.

Vishwa News 24

Recent Posts

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

31 minutes ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

50 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

1 hour ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

1 hour ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

1 hour ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

1 hour ago