Featured

ರಾಕಿಂಗ್ ಸ್ಟಾರ್ ಯಶ್ ಕೊಲೆಗೆ ಸಂಚು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಪೋಟಕ ಮಾಹಿತಿ  ಲಭ್ಯವಾಗಿದೆ.

ಕುಖ್ಯಾತ ರೌಡಿ ಸೈಕಲ್ ರವಿಯೇ ನಟ ಯಶ್ ಹತ್ಯೆಗೆ ಸಂಚು ಮಾಡಿದ್ದ. ಪೊಲೀಸರ ವಿಚಾರಣೆ ವೇಳೆ 2 ವರ್ಷಗಳ ಹಿಂದೆಯೇ ನಟ ಯಶ್ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು ಎಂಬ ಆಘಾತ ಸುದ್ದಿಯನ್ನು ಬಾಯಿಬಿಟ್ಟಿದ್ದಾನೆ.

2016 ರಲ್ಲಿ ಬರ್ತ್ ಡೇ ಕಾರ್ಯಕ್ರಮಕ್ಕೆಂದು ಕನಕಪುರ ಫಾರ್ಮ್ ಹೌಸ್‍ ಗೆ ಹೋಗಿದ್ದರು. ಅಲ್ಲಿ ಸೈಕಲ್ ರವಿ ಹಾಗೂ ಕೋದಂಡ ಸ್ಕೆಚ್ ಯಶ್ ಕೊಲೆ ಮಾಡಲು  ಮಾಡಿದ್ದರು. ಕೋದಂಡನ ಮೂಲಕ ಯಶ್ ಅವರನ್ನು ಕೊಲ್ಲಲು ಸ್ಕೆಚ್ ಹಾಕಲಾಗಿತ್ತು. ಸ್ಕೆಚ್ ರೀತಿಯಲ್ಲಿ ಕುಡಿದ ಮತ್ತಿನಲ್ಲಿಯೇ ಯಶ್ ಕಾರಿನ ಮೇಲೆ ಪುಡಿ ರೌಡಿಗಳು ಕಲ್ಲು ತೂರಾಟ ಮಾಡಿದ್ದರು. ಆದರೆ ಅಂದು ಯಶ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.

ಅಂದು ಯಶ್ ಹತ್ಯೆಗೆ ಮೊತ್ತೊಬ್ಬ ನಟನ ಕೈವಾಡ ಇದೆ ಎಂದು ಆರೋಪ ಕೇಳಿಬಂದಿದೆ. ಆದರೆ ನಟನ ಸಂಚಿನ ಬಗ್ಗೆಯೂ ಪೊಲೀಸರು ತೀವ್ರ ತನಿಖೆ ಮಾಡುತ್ತಿದ್ದಾರೆ. ಸದ್ಯಕ್ಕೆ ತನಿಖೆಯ ಯಾವುದೇ ಮಾಹಿತಿಯನ್ನು ಪೊಲೀಸರು ಬಹಿರಂಗ ಪಡಿಸುತ್ತಿಲ್ಲ.

ಕೋದಂಡ ಯಾರು? ಸದ್ಯಕ್ಕೆ ಕೋದಂಡ ಎಲ್ಲಿದ್ದಾನೆ ಎಂಬ ಸುಳಿಯೂ ಸಿಗುತ್ತಿಲ್ಲ. ಅವನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಕೋದಂಡ ಹಲವು ಪ್ರಕರಣಗಲ್ಲಿ ಬೇಕಾಗಿರುವ ಆರೋಪಿಯಾಗಿದ್ದು, ಇದುವರೆಗೂ ಪೊಲೀಸರ ಬಲೆಗೆ ಬಿದ್ದಿಲ್ಲ. ಕೋದಂಡ ಮತ್ತು ಸೈಕಲ್ ರವಿ ಇಬ್ಬರು ರೌಡಿಗಳಾಗಿದ್ದು, ವಿರೋಧಿಗಳಾಗಿದ್ದರು. ಆದರೆ ಒಬ್ಬರನ್ನು ಮುಗಿಸುವ ಸಲುವಾಗಿ ಇಬ್ಬರು ರಾಜಿ ಮಾಡಿಕೊಂಡಿದ್ದರು.

ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದ ಹಿನ್ನೆಲೆಯಲ್ಲಿ ನಿರ್ಮಾಪಕ ಜಯಣ್ಣ ಅವರ ಜೊತೆ ಹೋಗಿ ಯಶ್ ಕಮಿಷನರ್ ಕಚೇರಿಗೆ ಹೋಗಿ ಯಶ್ ಮೌಖಿಕ ದೂರು ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ದೂರಿನ ಆಧಾರದ ಮೇಲೆ ಮೈಸೂರು ಕರ್ನಾಟಕ ಭಾಗದಲ್ಲಿ ಬೆಂಗಳೂರಿನ ಕೆಲವು ರೌಡಿಗಳನ್ನು ವಶಕ್ಕೆ ಪಡೆದ ವಿಚಾರಣೆ ಮಾಡಿದ್ದು, ಜೈಲಿಗೂ ಕಳುಹಿಸಿದ್ದರು.

ಹತ್ಯೆಯ ಸಂಚಿನ ಪ್ರಕರಣ ಬೆಳಕಿಗೆ ಬಂದ ನಂತರ ಯಶ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾನು ಈ ಬಗ್ಗೆ ಲೈವ್ ಆಗಿ ಮಾತನಾಡುತ್ತೇನೆ ಎಂದು ಯಶ್ ಹೇಳಿದ್ದಾರೆ. ಜೂನ್ 27 ರಂದು ಸಿಸಿಬಿ ಪೊಲೀಸರು ಶೂಟೌಟ್ ಮಾಡಿ ರೌಡಿ ಸೈಕಲ್ ರವಿಯನ್ನು ಬಂಧಿಸಿದ್ದರು.

Vishwa News 24

Recent Posts

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

2 minutes ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ

12 minutes ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

21 minutes ago

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

3 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

3 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

3 hours ago