ಚಾಮರಾಜನಗರ: ಚಿತ್ರರಂಗಕ್ಕೂ ನನಗೂ ಸಂಪರ್ಕ ಕಡಿಮೆ. ಚಿತ್ರ ನಟಿ ರಾಗಿಣಿ ದ್ವಿವೇದಿಯನ್ನ ಪ್ರಚಾರಕ್ಕೆ ನಾವು ಕರೆಸಿರಲಿಲ್ಲ. ಚಿತ್ರ ರಂಗದಲ್ಲಿ ಕೆಲಸ ಮಾಡುವ ನನ್ನ ಸ್ನೇಹಿತರು ಪ್ರಚಾರಕ್ಕೆ ಕರೆಸಿದ್ದರು. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ ಎಂದು ಸಚಿವ ನಾರಾಯಣ ಗೌಡ ಹೇಳಿದರು.
ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಗಿಣಿ ಜತೆ ಶಿವಪ್ರಕಾಶ್ ಮೂರು ವರ್ಷ ಕೆಲಸ ಮಾಡಿದ್ದಾರೆ. ಅವರ ಹೆಸರೂ ಕೇಳಿ ಬರುತ್ತಿದೆ. ಇದರ ಬಗ್ಗೆಯೂ ನನಗೆ ಗೊತ್ತಿಲ್ಲ. ನನ್ನ ಚುನಾವಣಾ ಪ್ರಚಾರಕ್ಕೆ ಅವರನ್ನ ಕರೆಸಿರಲಿಲ್ಲ. ಅವರೇ ಪ್ರಚಾರಕ್ಕೆ ಬಂದ್ರೆ ನಾವೇನು ಮಾಡೋಕೆ ಆಗುತ್ತೆ ಎಂದು ಪ್ರಶ್ನಿಸಿದರು.
ನಟಿ ರಾಗಿಣಿ ಪರವಾಗಿ ನಮ್ಮ ಪಕ್ಷದಲ್ಲಿ ಯಾರೂ ಇಲ್ಲ. ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾಗಮಂಗಲದಲ್ಲಿ ಗಾಂಜಾ ಮಾರಾಟ ಇದ್ದರೆ ಹಿಡಿದುಕೊಡಲಿ. ಇಲ್ಲವಾದ್ರೆ ನಮಗೆ ಅಕ್ರಮ ತಡೆಯಲು ಸಲಹೆ ನೀಡಲಿ ಎಂದು ಸಚಿವ ನಾರಾಯಣ ಗೌಡ ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…