Featured

ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ , ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ  : ಶ್ರೀರಾಮುಲು – vishwanews24

ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ , ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ  : ಶ್ರೀರಾಮುಲು

ಬಳ್ಳಾರಿ: ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ. ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಹೈಕಮಾಂಡ್ ನಾಯಕರ ಮುಂದೆ ಕೇಳಿಕೊಳ್ಳುತ್ತೇನೆ. ಹೈಕಮಾಂಡ್ ಇಟ್ಟ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ಪಕ್ಷದ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ಮಾಜಿ ಸಚಿವ ಶ್ರೀರಾಮುಲು ಇಂದು ಪಕ್ಷದ ಮೇಲೆ ಸಾಫ್ಟ್ ಕಾರ್ನರ್ ತೋರಿಸಿದ್ದಾರೆ.
ಅಸಮಾಧಾನದ ಕುರಿತು ಬಳ್ಳಾರಿಯ ಮನೆಯಲ್ಲಿ ಶುಕ್ರವಾರ (ಜ.24) ಮಾತನಾಡಿದ ಶ್ರೀರಾಮುಲು, ಗುರುವಾರ ಜೆಪಿ ನಡ್ಡಾ ಅವರು ದೂರವಾಣಿ ಮೂಲಕ ಮಾತಾಡಿದರು. ಏನಾಗಿದೆ ಎನ್ನುವ ಮಾಹಿತಿ ಎಲ್ಲವನ್ನೂ ವಿವರಿಸಿದ್ದೇನೆ. ಕೋರ್ ಕಮಿಟಿಯಲ್ಲಿ ರಾಧಾಮೋಹನ್ ಅಗರವಾಲ್ ನಡೆದುಕೊಂಡ ಬಗ್ಗೆಯೂ ಹೇಳಿದ್ದೇನೆ. ರಾಮುಲು ನಿನ್ನ ಪರವಾಗಿ ನಾನಿದ್ದೇನೆ, ಯಾವುದೇ ಯೋಚನೆ ಮಾಡಬೇಡಿ. ಮುಂದೆ ದೆಹಲಿಗೆ ಬರುವುದಾಗಿದ್ದರೆ ಬನ್ನಿ ಎಂದು ನಡ್ಡಾ ಹೇಳಿದ್ದಾರೆ. ನಾನು ಸಹಾಯಕರಿಂದ ಅಪಾಯಿಟ್ಮೆಂಟ್ ತಗೊಂಡು ಬರುತ್ತೇನೆ ಎಂದು ಹೇಳಿದ್ದೇನೆ‌ ಎಂದರು.

ರಾಜಕಾರಣದಲ್ಲಿ ಕ್ರೆಡಿಬಿಲಿಟಿ ಬಹಳ ಮುಖ್ಯ. ಅದನ್ನು ನಾವು ಕಳೆದುಕೊಳ್ಳಬಾರದು. ಸ್ವಾಭಿಮಾನಕ್ಕೆ ತೊಂದರೆಯಾಗಿದ್ದರಿಂದ ನಾನು ಮಾತನಾಡಿದೆ. ಇದೀಗ ನನಗೆ ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಅವರಿಟ್ಟಂತ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ. ಒಂದು ದಿನ ನಿಗದಿ ಮಾಡಿಕೊಂಡು ದೆಹಲಿಗೆ ಹೋಗುತ್ತೇನೆ. ಕಷ್ಟಕ್ಕೆ ಕೂಲಿ ಕೊಡಿ, ಅಗೌರವ ಮಾಡಬೇಡಿ, ಅಪಮಾನ ಮಾಡಬೇಡಿ, ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಕೇಳಿದ್ದೇನೆ, ಇದನ್ನೇ ನಾಯಕರ ಮುಂದೆಯೂ ಹೇಳುತ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago