ಮೈಸೂರು: ‘ರಾಜಕಾರಣದ ಚಕ್ರವನ್ನು ಹೇಗೆ ತಿರುಗಿಸಬೇಕೆಂಬುದು ನನಗೂ ಗೊತ್ತಿದೆ. ಅಂಥ ಸಮಯ ಬರಲಿದ್ದು, ಆಗ ಚಕ್ರ ತಿರುಗಿಸೋಣ. ಯಾರೂ ಶಾಶ್ವತ ಅಲ್ಲ’ ಎಂದು ಶಾಸಕ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಗುರುವಾರ ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಉದ್ದೇಶಿಸಿ ಮಾರ್ಮಿಕವಾಗಿ ನುಡಿದರು.
ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ನನ್ನ ಕ್ಷೇತ್ರಕ್ಕೆ ಸಿಗಬೇಕಿದ್ದ ವೈದ್ಯಕೀಯ ಕಾಲೇಜನ್ನೇ ಕಿತ್ತುಕೊಂಡಿದ್ದಾರೆ. ಇನ್ನು ಇತರ ಶಾಸಕರ ಅನುದಾನ ಕಿತ್ತುಕೊಂಡಿರುವುದು ಯಾವ ಲೆಕ್ಕ?’ ಎಂದರು.
‘ಹಲವರನ್ನು ಬೆಳೆಸಿದ್ದೇನೆ, ಎಷ್ಟೋ ಮಂದಿಗೆ ಅಧಿಕಾರ ಕೊಟ್ಟಿದ್ದೇನೆ. ಆದರೆ, ಜಾತಿ ವ್ಯಾಮೋಹ, ಹಣಕ್ಕೆ ಮಾರಿಕೊಂಡಿಲ್ಲ. ಹಾಗೇನಾದರೂ ಇದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ನನ್ನ ಸ್ಟೈಲೇ ಬೇರೆ, ವಿಚಾರವೇ ಬೇರೆ. ಡಿಕೆಶಿ ಕರ್ನಾಟಕದ ಆಸ್ತಿ’ ಎಂದು ಹೇಳಿದರು.
ಶತಾಬ್ದಿ ಎಕ್ಸ್ಪ್ರೆಸ್ ರೈಲಿನಲ್ಲಿ ಮೈಸೂರಿಗೆ ಬಂದಿಳಿದ ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿಯಿಂದ ಸ್ವಾಗತಿಸಿದರು.
ರೈಲು ನಿಲ್ದಾಣದಿಂದ ಕಾಂಗ್ರೆಸ್ ಭವನದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ, ಕ್ರೇನ್ ನೆರವಿನಿಂದ ಸೇಬಿನ ಹಾರ ಹಾಕಿದರು. ಜೆಡಿಎಸ್ ಕಾರ್ಯಕರ್ತರೂ ಇದ್ದರು. ವೇದಿಕೆ ಕಾರ್ಯಕ್ರಮದ ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…